ಕೈಗಾರಿಕೋದ್ಯಮಿ ಗೌತಮ್ ಅದಾನಿಯವರ ಒಟ್ಟು ಸಂಪತ್ತಿನ ಮೌಲ್ಯವೆಷ್ಟು ಗೊತ್ತಾ..!?
ಗೌತಮ್ ಅದಾನಿ ಅವರ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ : ಬ್ಲೂಮ್ ಬರ್ಗ್ ವರದಿ
Team Udayavani, Mar 14, 2021, 11:42 AM IST
ನವ ದೆಹಲಿ : ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.
ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಪ್ರಸ್ತುತ ವಿಶ್ವದ 26 ನೇ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ, ಈ ವರ್ಷ ಅವರ ಸಂಪತ್ತಿಗೆ 2 16.2 ಬಿಲಿಯನ್ (ಸುಮಾರು 1.18 ಲಕ್ಷ ಕೋಟಿ ರೂ.) ಸೇರ್ಪಡೆಗೊಂಡಿದೆ. ಶುಕ್ರವಾರ ಅವರ ಒಟ್ಟು ನಿವ್ವಳ ಮೌಲ್ಯ 50 ಬಿಲಿಯನ್ (ಅಂದಾಜು 36.39 ಲಕ್ಷ ಕೋಟಿ ರೂ.)ಆಗಿದೆ ಎಂದು ವರದಿ ಹೇಳಿದೆ.
ಓದಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಅಮೆಜಾನ್ ಸಂಸ್ಥೆಯ ಮಾಲೀಕ ಜೆಫ್ ಬೆಜೋಸ್ .5 7.59 ಬಿಲಿಯನ್ (5.52 ಲಕ್ಷ ಕೋಟಿ ರೂ.) ಕಳೆದುಕೊಂಡರೆ, ಎರಡನೇ ಶ್ರೀಮಂತ ವ್ಯಕ್ತಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್ 10.3 ಬಿಲಿಯನ್ (ಸುಮಾರು 75,000 ಕೋಟಿ ರೂ) ಈ ವರ್ಷ ಅವರ ಸಂಪತ್ತಿಗೆ ಸೇರ್ಪಡೆಗೊಳ್ಳುವುದರ ಮೂಲಕ ಒಟ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ 10 ನೇ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ 8.05 ಬಿಲಿಯನ್ ಡಾಲರ್ (5.85 ಲಕ್ಷ ಕೋಟಿ ರೂ.) ಗಳಿಸಿದ್ದಾರೆ.
ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಮತ್ತು ಅದಾನಿ ಪೋರ್ಟ್ಸ್ ಅವರ ಒಟ್ಟು ಸಂಪತ್ತಿನ ಅರ್ಧಕ್ಕಿಂತ ಹೆಚ್ಚು (27 ಬಿಲಿಯನ್) ಪಾಲನ್ನು ಹೊಂದಿದೆ ಎಂದು ಬ್ಲೂಮ್ ಬರ್ಗ್ ಡೇಟಾ ತೋರಿಸಿದೆ.
ಆದಾಗ್ಯೂ, ಬಂದರುಗಳು ಮತ್ತು ವಿಮಾನ ನಿಲ್ದಾಣಗಳ ಹೊರತಾಗಿ, ಅವರು ಭಾರತದಲ್ಲಿ ತ್ವರಿತಗತಿಯಲ್ಲಿ ಡಾಟ ಸೆಂಟರ್ಸ್ ಮತ್ತು ಕಲ್ಲಿದ್ದಲು ಗಣಿಗಳನ್ನು ತಮ್ಮ ವ್ಯವಹಾರಕ್ಕೆ ಸೇರಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಓದಿ : ಆಹಾರ ಮತ್ತು ಇಂಧನ ಬೆಲೆಗಳ ಹೆಚ್ಚಳ: ಚಿಲ್ಲರೆ ಹಣದುಬ್ಬರ ಶೇ. 5.03ಕ್ಕೆ ಏರಿಕೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್