ಹೆಚ್ಚುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ: ಇಂದು ಮತ್ತೆ 36 ಹೊಸ ಸೋಂಕಿತರು
Team Udayavani, May 9, 2020, 12:58 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶುಕ್ರವಾರ ಒಟ್ಟು 48 ಸೋಂಕು ಪ್ರಕರಣಗಳು ದೃಢವಾಗಿದ್ದರೆ, ಶನಿವಾರ ಇದುವರೆಗೆ 36 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದೃಢವಾಗಿದೆ. ಬೆಂಗಳೂರು ನಗರದಲ್ಲಿ 12, ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳು, ದಾವಣಗೆರೆಯಲ್ಲಿ ಆರು, ದಕ್ಷಿಣ ಕನ್ನಡ, ಚಿತ್ರದುರ್ಗ ಮತ್ತು ಬೀದರ್ ನಲ್ಲಿ ತಲಾ ಮೂರು, ವಿಜಯಪುರ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದೃಢವಾಗಿದೆ.
ಬೆಂಗಳೂರಿನಲ್ಲಿ ಸೋಂಕಿತ ಸಂಖ್ಯೆ 419ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದೆ. ಉಳಿದಂತೆ ಪಿ-449 ಮತ್ತು ಪಿ-454 ಸಂಪರ್ಕದಿಂದ ಸೋಂಕು ತಾಗಿರುವುದು ದೃಢವಾಗಿದೆ.
ದಾವಣಗೆರೆಯಲ್ಲಿ ಮತ್ತೆ ಆರು ಪ್ರಕರಣಗಳು ದೃಢವಾಗಿದೆ. ಸೋಂಕಿತ ಸಂಖ್ಯೆ 651ರ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದ್ದರೆ, ಸೋಂಕಿತ ಸಂಖ್ಯೆ553ರ ದ್ವಿತೀಯ ಸಂಪರ್ಕದಿಂದ ಓರ್ವನಿಗೆ ಸೋಂಕು ತಾಗಿದೆ.
ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ದಕ್ಷಿಣ ಕನ್ನಡದ ಮೂವರಿಗೆ ಸೋಂಕು ತಾಗಿದೆ. ಒಂದೇ ಮನೆಯ ನಾಲ್ವರಿಗೆ ಸೋಂಕು ತಾಗಿದಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸೋಂಕಿತರ ಸಂಖ್ಯೆ ಬೆಳೆಯುತ್ತಿದೆ. ಭಟ್ಕಳದ ಏಳು ಜನರಿಗೆ ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 659ರ ದ್ವಿತೀಯ ಸಂಪರ್ಕದಿಂದ ಒಂದೂವರೆ ವರ್ಷದ ಮಗು ಸೇರಿದಂತೆ ಆರು ಜನರಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 740ರ ಸಂಪರ್ಕದಿಂದ 68 ವರ್ಷದ ವೃದ್ಧರಿಗೆ ಸೋಂಕು ದೃಢವಾಗಿದೆ.
ಬೀದರ್ ನಲ್ಲಿ ಮೂವರಿಗೆ ಸೋಂಕು ದೃಢವಾಗಿದೆ. ಸೋಂಕಿತ ಸಂಖ್ಯೆ 647 ಮತ್ತು 648ರ ಸಂಪರ್ಕದಿಂದ ಕ್ರಮವಾಗಿ 30 ವರ್ಷದ ಗಂಡು ಮತ್ತು 12 ವರ್ಷದ ಬಾಲಕಿಗೆ ಸೋಂಕು ತಾಗಿದೆ. ಮತ್ತೊಂದು ಸೋಂಕಿತನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ.
ಚಿತ್ರದುರ್ಗದಲ್ಲಿ ಮತ್ತೆ ಮೂವರಿಗೆ ಸೋಂಕು ದೃಢವಾಗಿದ್ದು, ಗುಜರಾತ್ ನ ಅಹಮದಾಬಾದ್ ಗೆ ಪ್ರಯಾಣ ಮಾಡಿದ ಹಿನ್ನೆಲೆಯಳ್ಳ ಮೂವರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.
ವಿಜಯಪುರದ 11 ವರ್ಷದ ಬಾಲಕಿಗೆ ಸೋಂಕು ತಾಗಿದ್ದರೆ, ತುಮಕೂರಿನ 45 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್