ಕಾನೂನು ಸಚಿವಾಲಯ ಅಂಚೆ ಕಚೇರಿಯಲ್ಲ!

100 ದಿನಗಳಲ್ಲಿ 5ಜಿ ಪ್ರಯೋಗ ನಿರೀಕ್ಷೆ: ರವಿಶಂಕರ್‌ ಪ್ರಸಾದ್‌

Team Udayavani, Jun 4, 2019, 6:00 AM IST

r-45

ಹೊಸದಿಲ್ಲಿ: ಕಾನೂನು ಸಚಿವಾಲಯವು ಅಂಚೆ ಕಚೇರಿಯಲ್ಲ. ನ್ಯಾಯಾಂಗ ನೇಮಕಾತಿ ವಿಚಾರದಲ್ಲಿ ನಾವು ನಮ್ಮ ಪಾತ್ರ ನಿರ್ವಹಿಸುತ್ತೇವೆ. ಆದರೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಗೌರವ ಕಾಪಾಡಿಕೊಂಡೇ ಕೆಲಸ ಮಾಡುತ್ತೇವೆ ಎಂದು ಎರಡನೇ ಅವಧಿಗೆ ಕಾನೂನು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅನಂತರ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ನ್ಯಾಯಾಂಗ ನೇಮಕಾತಿ ತ್ವರಿತಗೊಳಿಸುವಲ್ಲಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಮತ್ತು ಕೊಲಿಜಿಯಂ ಜೊತೆ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇನ್ನು ತ್ರಿವಳಿ ತಲಾಖ್‌ ಮಸೂದೆ ಯನ್ನು ಪುನಃ ಮಂಡನೆ ಮಾಡುತ್ತೇವೆ. ಇದು ನಮ್ಮ ಸರಕಾರದ ಗುರಿಯೂ ಹೌದು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಬಾರಿ ಈ ಮಸೂದೆಯನ್ನು ಮಂಡಿಸಿದ್ದರೂ ಕಾಂಗ್ರೆಸ್‌ ಸೇರಿದಂತೆ ಇತರ ವಿಪಕ್ಷಗಳ ವಿರೋಧ ದಿಂದಾಗಿ ರಾಜ್ಯಸಭೆಯಲ್ಲಿ ಅನುಮೋದನೆ ಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿತ್ತು.

ಇನ್ನು ಟೆಲಿಕಾಂ ಖಾತೆಯನ್ನೂ ಪ್ರಸಾದ್‌ ಹೊಂದಿದ್ದು, ಮುಂದಿನ 100 ದಿನಗಳಲ್ಲಿ 5ಜಿ ಪ್ರಯೋಗ ನಡೆಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ತರಂಗಾಂತರಗಳ ಹರಾಜು ಪ್ರಕ್ರಿಯೆಯನ್ನೂ ನಡೆಸುತ್ತೇವೆ. ನಮ್ಮ ಬಳಿ ಸಾಕಷ್ಟು ತರಂಗಾಂತರಗಳಿವೆ. 5ಜಿ ಸೇವೆ ನೀಡುವುದಕ್ಕೆ ಅಗತ್ಯವಿರುವ ತರಂಗಾಂ ತರವೂ ಸೇರಿದಂತೆ 4.9 ಲಕ್ಷ ಕೋಟಿ ರೂ. ಮೌಲ್ಯದ 8744 ಮೆ.ಹ ತರಂಗಾಂತರವಿದೆ ಎಂದು ಪ್ರಸಾದ್‌ ಹೇಳಿದ್ದಾರೆ.

ಇರಾನಿ ಅಧಿಕಾರ ಸ್ವೀಕಾರ: ಇದೇ ವೇಳೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಸ್ಮತಿ ಇರಾನಿ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡುವುದೇ ನನ್ನ ಗುರಿ ಎಂದು ಸ್ಮತಿ ಹೇಳಿದ್ದಾರೆ.

ಸೈಕಲ್‌ನಲ್ಲೇ ಕಚೇರಿಗೆ ಬಂದ ಸಚಿವ
ಕೇಂದ್ರದ ಆರೋಗ್ಯ ಸಚಿವರಾಗಿ ಸೋಮವಾರ ಡಾ| ಹರ್ಷವರ್ಧನ್‌ ಅಧಿಕಾರ ಸ್ವೀಕರಿಸಿದ್ದು, ಆಯುಷ್ಮಾನ್‌ ಭಾರತ್‌ ಯೋಜನೆಯ ಸಮರ್ಪಕ ಅನುಷ್ಠಾನವೇ ನನ್ನ ಮೊದಲ ಗುರಿ ಎಂದು ಹೇಳಿಕೊಂಡಿದ್ದಾರೆ.  ಡಾ| ಹರ್ಷವರ್ಧನ್‌ ಅವರು ತಮ್ಮ ನಿವಾಸದಿಂದ ನಿರ್ಮಾಣ ಭವನ್‌ನಲ್ಲಿರುವ ಕಚೇರಿಗೆ ಸೈಕಲ್‌ ತುಳಿದು ಕೊಂಡೇ ಆಗಮಿಸಿದ್ದು ವಿಶೇಷವಾಗಿತ್ತು. ಜೂ. 3ನ್ನು ವಿಶ್ವಸಂಸ್ಥೆಯು ವಿಶ್ವ ಬೈಸಿಕಲ್‌ ದಿನ ಎಂದು ಘೋಷಿಸಿರುವ ಕಾರಣ, ಸೈಕಲ್‌ನಲ್ಲೇ ಆಗಮಿಸಿದ ಹರ್ಷವರ್ಧನ್‌, ಸುಸ್ಥಿರ ಅಭಿವೃದ್ಧಿ ಸಾಧಿಸಲು ಸೈಕ್ಲಿಂಗ್‌ನ ಕೊಡುಗೆಯೂ ಇದೆ ಎಂದಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.