ಕ್ರೂರಿ ಕೋವಿಡ್: ತಾಯಿ ಶವದ ಎದುರು ದಾಂಪತ್ಯ ಜೀವನಕ್ಕೆ ಕಾಲಿಡುವಂತಾಯಿತು ಪುತ್ರನ ಪರಿಸ್ಥಿತಿ
Team Udayavani, May 29, 2021, 12:52 PM IST
ತೆಲಂಗಾಣ: ಹೆತ್ತವರ ಆಶೀರ್ವಾದೊಂದಿಗೆ ಹೊಸ ಜೀವನಕ್ಕೆ ಕಾಲಿಡಬೇಕೆಂದು ವಿದೇಶದಿಂದ ಭಾರತಕ್ಕೆ ಬಂದಿದ್ದ ಮಗ,ತಾಯಿಯ ಶವ ಮುಂದಿಟ್ಟುಕೊಂಡು ಪತ್ನಿಯ ಕೊರಳಿಗೆ ತಾಳಿ ಕಟ್ಟಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಇಸ್ಮಾಯಿಲ್ ಖಾನ್ಪೇಟ್ನಲ್ಲಿ ಇಂತಹದ್ದೊಂದು ಕಣ್ಣೀರು ತರಿಸುವಂತಹ ಪ್ರಸಂಗ ಜರುಗಿದೆ.
ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಎಂಬಾತನಿಗೆ ಮೇ 21ರಂದು ಮದುವೆ ನಿಶ್ಚಯವಾಗಿದೆ. ಮದುವೆಗೆಂದು ಆತ ತನ್ನೂರಿಗೆ ಮರಳಿದ್ದ. ಆದರೆ ಇವರ ತಾಯಿ ಪಾಲ್ಪಾನೂರಿ ರೇಣುಕಾ (49) ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ರೇಣುಕಾ ಅವರ ಸಹೋದರನೂ ಕೂಡ ಕೋವಿಡ್ಗೆ ಬಲಿಯಾಗಿದ್ದರು. ಹೀಗಾಗಿ ರಾಕೇಶ್ ತನ್ನ ವಿವಾಹವನ್ನು ಮುಂದೂಡಿ, ಅಮ್ಮ ಗುಣಮುಖರಾಗಿ ಕ್ಷೇಮವಾಗಿ ಮನೆಗೆ ಬರಲೆಂದು ಕಾಯುತ್ತಿದ್ದ.
ಆದರೆ ತಾಯಿ ಅವರೂ ಕೂಡಾ ಕೋವಿಡ್ನಿಂದ ಸಾವನ್ನಪ್ಪಿದರು. ಬಳಿಕ ಆಯಂಬುಲೆನ್ಸ್ನಲ್ಲಿ ಆಸ್ಪತ್ರೆಯಿಂದ ಗ್ರಾಮಕ್ಕೆ ಮೃತದೇಹವನ್ನು ಕರೆತರಲಾಯಿತು.
ಈ ವೇಳೆ, ಅಮ್ಮನ ಮೃತದೇಹದ ಮುಂದೆಯೇ ಭಾರವಾದ ಮನಸ್ಸು, ದು:ಖದ ಮಡುವಿನಲ್ಲೇ ವರ ರಾಕೇಶ್ ಹಾಗೂ ವಧು ಪರಸ್ಪರ ಹಾರ ಬದಲಾಯಿಸಿಕೊಂಡರು. ಈ ಮೂಲಕ ತೀರಿಹೋದ ಅಮ್ಮನ ಶವದ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಂಥ ಮನಕಲಕುವ ಘಟನೆಗೆ ಸಾಕ್ಷಿಯಾಗಿ ಅಲ್ಲಿ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು