ಖಲಿಸ್ತಾನಿ ತಂಟೆಗೆ ಬಂದರೆ ಇಂದಿರೆಯ ಗತಿ ನಿಶ್ಚಿತ! ಅಮೃತ್ ಪಾಲ್ ಸಿಂಗ್
Team Udayavani, Feb 24, 2023, 6:05 AM IST
ಅಮೃತಸರ: ಖಲಿಸ್ತಾನ್ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಹತ್ತಿಕ್ಕಲು ನೋಡಿದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅದಕ್ಕೆ ತಕ್ಕ ಬೆಲೆ ತತ್ತಿದ್ದಾರೆ.
ಈಗಲೂ ಅಷ್ಟೇ, ಪ್ರಧಾನಿ ಮೋದಿ, ಅಮಿತ್ ಶಾ, ಭಗವಂತ್ಮಾನ್ ಯಾರೇ ಬಂದರೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಖಲಿಸ್ತಾನಿಗಳ ಪರ ನಾಯಕ ಅಮೃತ್ ಪಾಲ್ ಸಿಂಗ್ ಬಹಿರಂಗವಾಗಿಯೇ ಸವಾಲೆಸೆದಿದ್ದಾನೆ.
ಪೊಲೀಸರು ಬಂಧಿಸಿರುವ ಅಮೃತ್ಪಾಲ್ ಸಹಚರ ಲವ್ಪ್ರೀತ್ ತೂಫಾನ್ನನ್ನು ಬಿಡುಗಡೆಗೊಳಿಸುವಂತೆ ಖಲಿಸ್ತಾನ್ ಪರ ಸಂಘಟನೆ ವಾರಿಸ್ ಪಂಜಾಬ್ ದೇ ಬೆಂಬಲಿಗರು ಅಮೃತ್ನ ನಾಯಕತ್ವದಲ್ಲಿ ಅಜ್ನಾಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಕತ್ತಿ, ಬಂದೂಕುಗಳನ್ನು ಹಿಡಿದು ಪೊಲೀಸರನ್ನು ಬೆದರಿಸಿ, ಬ್ಯಾರಿಕೇಡ್ ಕೂಡ ಮುರಿದು ಹಾಕಿದ್ದಾರೆ.
ಘಟನೆಯಲ್ಲಿ 6 ಮಂದಿ ಪೊಲೀಸರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಮಾತನಾಡಿದ ಅಮೃತ್, ಜನರು ಹಿಂದೂರಾಷ್ಟ್ರ ಕೇಳುವಾಗ ನಾವು ಏಕೆ ಖಲಿಸ್ತಾನ ಕೇಳಬಾರದು. ನಮ್ಮ ದಾರಿಗೆ ಅಡ್ಡ ಬಂದರೆ ಇಂದಿರಾ ಗಾಂಧಿ ತೆತ್ತ ಬೆಲೆಯನ್ನೇ ತೆರಬೇಕಾಗುತ್ತದೆ. ಲವ್ಪ್ರೀತ್ನನ್ನು ಬಿಡುಗಡೆಗೊಳಿಸದೇ ಹೋದರೆ, ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ