ಮಹಾ ಡಿಸಿಎಂ ಪವಾರ್ಗೆ ಸೇರಿದ 1 ಸಾವಿರ ಕೋಟಿ ರೂ.ಆಸ್ತಿ ಜಪ್ತಿ
Team Udayavani, Nov 2, 2021, 8:30 PM IST
ಮುಂಬೈ: ಮಹಾರಾಷ್ಟ್ರದ ಡಿಸಿಎಂ, ಎನ್ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್ ಅವರ ಕುಟುಂಬ ಸದಸ್ಯರಿಗೆ ಸೇರಿದ 1 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.
ಆದಾಯ ತೆರಿಗೆ ಈ ಕ್ರಮ ಕೈಗೊಂಡಿದೆ. ನವದೆಹಲಿಯ ಪ್ರಮುಖ ಸ್ಥಳವೊಂದರಲ್ಲಿರುವ ಫ್ಲ್ಯಾಟ್, ಮಹಾರಾಷ್ಟ್ರದ ಸತಾರಾದಲ್ಲಿರುವ ಜರಂದೇಶ್ವರ್ ಸಹಕಾರಿ ಸಕ್ಕರೆ ಕಾರ್ಖಾನೆ, ಗೋವಾದಲ್ಲಿರುವ ವಿಲಾಸಿ ರೆಸಾರ್ಟ್ ಅನ್ನು ಬೇನಾಮಿ ಆಸ್ತಿ ಕಾಯ್ದೆ 1988ರ ಅನ್ವಯ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅ.7ರಂದು ನಡೆದಿದ್ದ ಶೋಧ ಕಾರ್ಯಾಚರಣೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಅಜಿತ್ ಪವಾರ್ ಅವರ ಪುತ್ರ ಪಾರ್ಥ ಪವಾರ್ ಅವರಿಗೆ ಸೇರಿದ ಕೆಲವು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಅ.15ರಂದು ತೆರಿಗೆ ಇಲಾಖೆ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ 184 ಕೋಟಿ ರೂ. ಮೌಲ್ಯದ ದಾಖಲೆಗಳು ಇಲ್ಲದ ಆದಾಯ ಪತ್ತೆಯಾಗಿತ್ತು ಎಂದು ಉಲ್ಲೇಖೀಸಲಾಗಿತ್ತು.
ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಅಜಿತ್ ಪವಾರ್ ಹೊಂದಿರುವ ಕಚೇರಿಗಳು, ಸಂಸ್ಥೆಗಳಿಗೆ ರಿಯಲ್ ಎಸ್ಟೇಟ್ ಕ್ಷೇತ್ರದ ಎರಡು ಪ್ರಮುಖ ಕಂಪನಿಗಳು ಹೂಡಿಕೆ ಮಾಡಿದ್ದವು ಎಂದು ತೆರಿಗೆ ಇಲಾಖೆ ಕಂಡುಕೊಂಡಿತ್ತು. ನಕಲಿ ಷೇರುಗಳು, ದಾಖಲೆಗಳು ಮತ್ತು ಸುರಕ್ಷಿತವಲ್ಲದ ಸಾಲಗಳು, ಕೆಲವೊಂದು ಸೇವೆಗಳ ಹೆಸರಿನಲ್ಲಿ ಮುಂಗಡ ಮೊತ್ತ ಪಾವತಿ ಸೇರಿದಂತೆ ಹಲವು ನಿಯಮ ಮೀರಿದ ದಾರಿಗಳ ಮೂಲಕ ಹೂಡಿಕೆ ಮಾಡಲಾಗಿದೆ ಮತ್ತು ರಾಜ್ಯದ ಪ್ರಮುಖ ರಾಜಕೀಯ ಕುಟುಂಬಕ್ಕೆ ಸೇರಿದ್ದ ವಹಿವಾಟು ಇದಾಗಿದೆ ಎಂದು ದೃಢಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ