ಕೋವಿಡ್ ನಿಯಂತ್ರಣ : ಮಾರ್ಕೆಟ್ ಪ್ರವೇಶಿಸಲು ಇಲ್ಲಿ ಶುಲ್ಕ ಪಾವತಿಸಬೇಕು..!


Team Udayavani, Mar 31, 2021, 10:39 AM IST

₹ 5 To Enter Market For An Hour – This City’s Plan To Avoid Lockdown

ನಾಸಿಕ್ :  ದೇಶದಾದ್ಯಂತ ಕೋವಿಡ್ ರೂಪಾಂತರಿ ಅಲೆ ಏರಿಕೆಯಾಗುತ್ತಿರುವ ಕಾರಣದಿಂದ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುವುದರ ಬಗ್ಗೆ ಈಗಾಗಲೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ದೇಶದ ಕೆಲವೊಂದು ರಾಜ್ಯಗಳಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸೋಂಕು ನಿವಾರಣೆಗಾಗಿ ನಿರ್ಬಂಧಗಳನ್ನು ಹೇರುತ್ತಿವೆಯಾದರೂ ಜನರು ಅದಕ್ಕೆ ಸರಿಯಾಗಿ ಸ್ಪಂದಿಸಿದಂತೆ ಕಾಣಿಸುತ್ತಿಲ್ಲ. ಕೆಲವೊಂದು ರಾಜ್ಯಗಳಲ್ಲಿ ಸರ್ಕಾರಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದಿರುವವರಿಗೆ ದಂಡವನ್ನು ಕೂಡ ಹಾಕಲಾಗುತ್ತಿದೆ.

ಕೋವಿಡ್ ಹಾಟ್ ಸ್ಪಾಟ್ ಎಂದು ಕರೆಸಿಕೊಂಡಿದ್ದ ಮಹಾರಾಷ್ಟ್ರದಲ್ಲಿ ಮತ್ತೆ ರೂಪಾಂತರಿ ಸೋಂಕು ತನ್ನ ಹರಡುವ ವೇಗವನ್ನು ದಿನನಿತ್ಯ ಹೆಚ್ಚಿಸಿಕೊಳ್ಳುತ್ತಿದ್ದು, ಸರ್ಕಾರ ಲಾಕ್ಡೌನ್ ಬಗ್ಗೆ ಚಿಂತಿಸುವಂತೆ ಮಾಡಿದೆ.

ಓದಿ : ನಿತ್ಯಭವಿಷ್ಯ: ಈ ರಾಶಿಯವರಿಗೆ ಶತ್ರುಗಳೇ ಅಚ್ಚರಿಗೊಳ್ಳುವಂತೆ ಯಶಸ್ಸು ಸಿಗಲಿದೆ !

ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಒಂದು ನಗರದಲ್ಲಿ ಮಾರುಕಟ್ಟೆಗಳಿಗೆ ಬರುವ ಜನರಿಗೆ, ಅಲ್ಲಿನ ಆಡಳಿತ ಒಂದಿಷ್ಟು ನಿರ್ಬಂಧಗಳನ್ನು ಹಾಕಿದ್ದು, ಈಗ ಮಾದರಿ ಬೆಳವಣಿಗೆ ಎಂದು ಹೇಳಿಸಿಕೊಳ್ಳುತ್ತಿದೆ. ಹೌದು, ಪಶ್ಚಿಮ  ಭಾರತದ ಮಹಾರಾಷ್ಟ್ರದ ಪ್ರಾಚಿನ ನಗರ ಎಂದು ಕರೆಸಿಕೊಳ್ಳುವ  ನಾಸಿಕ್ ನಗರದ  ಆಡಳಿತ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರುಕಟ್ಟೆಗೆ ಬರುವ ಎಲ್ಲಾ ನಾಗರಿಕರಿಗೆ ಶುಲ್ಕ ವಿಧಿಸಲು ಮುಂದಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಾಸಿಕ್ ನಗರದ ಪೊಲೀಸ್ ಆಯುಕ್ತ ದೀಪಕ್ ಪಾಂಡೆ,  ನಾಸಿಕ್‌ ನಲ್ಲಿ ಕೋವಿಡ್ 19 ಹರಡುವಿಕೆಯನ್ನು ನಿಯಂತ್ರಿಸಲು ನಾವು ವಿಭಿನ್ನ ವಿಧಾನವನ್ನು ಬಳಸುತ್ತಿದ್ದೇವೆ. ಮಾರುಕಟ್ಟೆಗೆ ಬರುವ ಪ್ರತಿ ವ್ಯಕ್ತಿಗೆ ಗಂಟೆಗೆ 5 ರೂ. ಟಿಕೆಟ್ ನ್ನು ನೀಡುತ್ತಿದ್ದೇವೆ. ಇದು ನಗರವನ್ನು ಲಾಕ್‌ ಡೌನ್‌ ಗೆ ಒಳಗಾಗದಂತೆ ಮಾಡುವ ಪ್ರಯತ್ನವಾಗಿದೆ” ಎಂದು ಅವರು  ಹೇಳಿದ್ದಾರೆ.

ಇನ್ನು, ಮಾರ್ಚ್ 30 ರಂದು ಮಹಾರಾಷ್ಟ್ರದಲ್ಲಿ ಬರೋಬ್ಬರಿ 27, 918 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 139 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಏತನ್ಮಧ್ಯೆ, ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೊಪೆ, ವೈರಸ್ ಪರೀಕ್ಷೆಗೆ ಒಳಪಡುವಂತೆ ಮಹಾರಾಷ್ಟರ ಜನರಿಗೆ ಕೋರಿಕೊಂಡಿದ್ದು, “ಈಗಾಗಲೇ ಆಸ್ಪತ್ರೆಗಳಿಗೆ ಐಸಿಯು ಮತ್ತು ಆಕ್ಸಿಜನ್ ಬೆಡ್ ಗಳು  ತುಂಬುತ್ತಿವೆ. ಪರೀಕ್ಷೆಗೆ ಒಳಪಡಬೇಕೆಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ರಾಜೇಶ್ ಟೊಪೆ ಹೇಳಿದ್ದಾರೆ.

ಇನ್ನು, ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಸೋಂಕಿನ ಬಗ್ಗೆ ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ನವಾಬ್ ಮಲಿಕ್, ರಾಜ್ಯಕ್ಕೆ ಲಾಕ್ಡೌನ್ ಹೇರಲು ಸಾಧ್ಯವಿಲ್ಲ ಮತ್ತು ಲಾಕ್ಡೌನ್ ಬದಲಾಗಿ ಬೇರೆ ಆಯ್ಕೆಗಳನ್ನು ಪರಿಗಣಿಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೇಳಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಓದಿ : ಐಪಿಎಲ್‌ನಲ್ಲಿ ಹೊಸತನ: ಈ ಬಾರಿಯ ಐಪಿಎಲ್‌ ನಿಯಮಗಳಲ್ಲಿ ಬಿಸಿಸಿಐನಿಂದ ಪ್ರಮುಖ ಬದಲಾವಣೆ

 

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.