ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಓರ್ವ ಸಾವು, 20 ಮಂದಿಗೆ ಗಾಯ, ಮೂವರು ನಾಪತ್ತೆ
Team Udayavani, Sep 11, 2022, 1:34 PM IST
ಸೂರತ್ : ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿ. ಇಪ್ಪತ್ತು ಮಂದಿ ಗಾಯಗೊಂಡು ಮೂವರು ನಾಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಸಂಭವಿಸಿದೆ.
ಗುಜರಾತಿನ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ ರಾಸಾಯನಿಕ ಸಂಗ್ರಹಿಸಿಟ್ಟಿದ್ದ ಕಂಟೈನರ್ ಗಳಿಗೆ ಬೆಂಕಿ ತಗುಲಿ ಸ್ಪೋಟಗೊಂಡಿದೆ, ಇದರಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ, ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹದಿನೈದು ಅಗ್ನಿಶಾಮಕ ವಾಹನ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಕುರುತು ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಡಿವಿ ಬಲ್ದಾನಿಯಾ ಮೃತದೇಹವನ್ನು ತಡರಾತ್ರಿ ಹೊರತೆಗೆಯಲಾಗಿದೆ ಬೆಂಕಿಯಲ್ಲಿ 20 ಕಾರ್ಮಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಅಲ್ಲದೆ ಅವಘಡದಲ್ಲಿ ಮೂವರು ನಾಪತ್ತೆಯಾಗಿದ್ದು ಅವರ ಹುಡುಕಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ವಿಜಯಪುರದಲ್ಲಿ ಭಾರಿ ಮಳೆ: ಭೀಮಾ ನದಿಯ ಸೇತುವೆ ಮುಳುಗಡೆ, ವಸತಿ ಪ್ರದೇಶ ಜಲಾವೃತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ