Assam CM ವಿರುದ್ಧ10 ಕೋಟಿ ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್
Team Udayavani, Apr 6, 2024, 6:18 AM IST
ಗುವಾಹಾಟಿ: ಅಸ್ಸಾಂ ಸಿಎಂ ಹಿಮಾಂತ ಶರ್ಮಾ ಬಿಸ್ವಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ಪಕ್ಷದ ವಿರುದ್ಧ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದಾರೆ ಎಂಬ ಆರೋಪ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರದ್ದು. ಈ ಹಿನ್ನೆಲೆ ಯಲ್ಲಿ ಅಸ್ಸಾಂನ ಕಾಮರೂಪ್ ಜಿಲ್ಲೆಯ ಸ್ಥಳೀಯ ಕೋರ್ಟ್ ಒಂದರಲ್ಲಿ ಅವರು, ಮುಖ್ಯಮಂತ್ರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾವೆ ಹೂಡಿದ್ದಾರೆ. ಅಸ್ಸಾಂ ಸಿಎಂ ನೀಡಿದ ಹೇಳಿಕೆಯಿಂದ ಕಾಂಗ್ರೆಸ್ನ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ತ್ರಿವಳಿ ತಲಾಕ್ ಜಾರಿಗೆ ಕಾಂಗ್ರೆಸ್ ಯತ್ನ
ಕಾಂಗ್ರೆಸ್ ಚುನಾವಣ ಪ್ರಣಾಳಿಕೆಯಲ್ಲಿ ವಿದೇಶಿ ಪ್ರಭಾವ ಎದ್ದು ಕಾಣುತ್ತಿದೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ ಆರೋಪಿಸಿದ್ದಾರೆ. ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ವಿದೇಶೀ ಸಂಸ್ಥೆಯನ್ನು ಕಾಂಗ್ರೆಸ್ ಬಳಕೆ ಮಾಡಿರುವ ಶಂಕೆ ಇದೆ ಎಂದು ಆರೋಪಿ ಸಿದ್ದಾರೆ.
ಸದ್ಯ ರದ್ದಾಗಿರುವ ತ್ರಿವಳಿ ತಲಾಖ್ ಮರು ಜಾರಿ ಮಾಡುವ ಬಗ್ಗೆ ಅದು ವಾಗ್ಧಾನ ಮಾಡಿದೆ. ಇದರ ಜತೆಗೆ ಚುನಾಯಿತ ರಾಜ್ಯ ಸರಕಾರವನ್ನು ಕಿತ್ತು ಹಾಕುವ ಅಂಶವನ್ನೂ ಅದು ಪ್ರಸ್ತಾವಿಸಿದೆ. ಮೋದಿ ಸರಕಾರ ಜಾರಿ ಮಾಡಿರುವ ಹೊಸ ಪಿಂಚಣಿ ವ್ಯವಸ್ಥೆ ಬದಲಾಗಿ ಹಳೆಯ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದರು. ಇದಲ್ಲದೆ ನ್ಯೂಯಾರ್ಕ್ ಮತ್ತು ಥೈಲ್ಯಾಂಡ್ಗಳ ಚಿತ್ರಗಳನ್ನು ಪ್ರಣಾಳಿಕೆಯಲ್ಲಿ ಬಳಸಿಕೊಂಡು ದೇಶದ ವರ್ಚಸ್ಸು ತಗ್ಗಿಸುವ ಕೆಲಸದಲ್ಲಿ ತೊಡಗಿದೆ. ಎಂದೂ ದೂರಿದ್ದಾರೆ ಅಸ್ಸಾಂ ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.