ಅತ್ಯಾಚಾರಿ ರಾಮ್ ರಹೀಮ್ ಗೆ 20 ವರ್ಷ ಜೈಲು; 30 ಲಕ್ಷ ರೂ. ದಂಡ


Team Udayavani, Aug 28, 2017, 3:31 PM IST

Dera-baba.jpg

ರೋಹ್ಟಕ್/ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿತವಾಗಿರುವ ಡೇರಾ ಸಚ್ಚಾ ಸೌದಾದ ಸ್ವಘೋಷಿತ ದೇವಮಾನವ ಗುರ್ಮೀತ್ ರಾಂ ರಹೀಂ ಸಿಂಗ್ ಗೆ ಸೋಮವಾರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಪ್ ಸಿಂಗ್ ಅವರು ರೋಹ್ಟಕ್ ಜೈಲಿನಲ್ಲಿಯೇ 20 ವರ್ಷ ಜೈಲು ಶಿಕ್ಷೆ ಹಾಗೂ 30 ಲಕ್ಷ ರೂಪಾಯಿ ದಂಡ ವಿಧಿಸಿದರು. 

ಅತ್ಯಾಚಾರ ಪ್ರಕರಣದ ಕುರಿತಂತೆ ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ತೀರ್ಪು ಓದಲು ಆರಂಭಿಸಿದಾಗ ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ತನ್ನ ತಪ್ಪನ್ನು ಕ್ಷಮಿಸುವಂತೆ ಹೇಳಿ ಕುಸಿದು ಬಿದ್ದ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ರೋಹ್ಟಕ್ ಜೈಲಿನಲ್ಲಿಯೇ ಅತ್ಯಾಚಾರಿ ರಾಂ ರಹೀಂಗೆ ನ್ಯಾಯಾಧೀಶರು ಶಿಕ್ಷೆಯನ್ನು ಪ್ರಕಟಿಸಿದರು. ಜೈಲಿನ ಸುತ್ತ 17 ಸಾವಿರ ಪೊಲೀಸ್ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು.

ಮೊದಲಿಗೆ ಸುನಾರಿಯ ಜೈಲಿನಲ್ಲಿ  ರಾಮ್ ರಹೀಮ್ ಪರ ವಕೀಲರು ವಾದ ಮಂಡಿಸಿದ್ದರು. ವಕೀಲರಾದ ಎಸ್ ಕೆ ಗಾರ್ಗ್ ನರ್ವಾನ್ ಬಾಬಾ ಪರ ವಾದಿಸಿದ್ದರು. ಎರಡೂ ಕಡೆಯ ವಕೀಲರಿಗೆ ನ್ಯಾಯಾಧೀಶರು ತಲಾ 10 ನಿಮಿಷ ವಾದ ಮಂಡಿಸಲು ಅವಕಾಶ ಕಲ್ಪಿಸಿದ್ದರು.

ರಾಂ ರಹೀಂ ವಯಸ್ಸು, ಆರೋಗ್ಯ ಪರಿಗಣಿಸಿ ಕಡಿಮೆ ಶಿಕ್ಷೆ ಕೊಡಿ ಎಂದು ರಾಮ್ ರಹೀಮ್ ಸಿಂಗ್ ಪರ ವಕೀಲ ಗಾರ್ಗ್ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದರು. ಅತ್ಯಾಚಾರಿ ರಾಂ ರಹೀಂಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಪ್ರಾಸಿಕ್ಯೂಷನ್(ಸಿಬಿಐ) ಪರ ವಕೀಲರು ಪ್ರತಿ ವಾದ ಮಂಡಿಸಿದ್ದರು.

ರಾಮ್ ರಹೀಮ್ ಸಿಂಗ್ ಗೆ ಐಪಿಸಿ ಸೆಕ್ಷನ್ 376(ಅತ್ಯಾಚಾರ), 506(ಜೀವ ಬೆದರಿಕೆ), 511ರ ಅಡಿ ನ್ಯಾಯಾಧೀಶರಾದ ಜಗದೀಪ್ ಸಿಂಗ್ ಅವರು ಗರಿಷ್ಠ (2 ಅತ್ಯಾಚಾರ ಪ್ರಕರಣಗಳು ಸೇರಿ 20ವರ್ಷ) ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

ರೇಪಿಸ್ಟ್ ಬಾಬಾಗೆ ವಿವಿಐಪಿ ಸೌಕರ್ಯ ಕೊಡುವಂತಿಲ್ಲ:

ಅತ್ಯಾಚಾರ ಪ್ರಕರಣದಲ್ಲಿ  20 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಯಾವುದೇ ವಿಶೇಷ ಸೌಲಭ್ಯ ಕೊಡುವಂತಿಲ್ಲ ಎಂದು ಕೋರ್ಟ್ ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದೆ.

ಅಳುತ್ತಾ ಕಟಕಟೆಯಲ್ಲಿ ಕುಸಿದು ಬಿದ್ದು ನಾಟಕವಾಡಿದ ರಾಮ್ ರಹೀಮ್!

ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಕಠಿಣ ಜೈಲುಶಿಕ್ಷೆಯನ್ನು ನ್ಯಾಯಾಧೀಶರು ಪ್ರಕಟಿಸಿದ ಬಳಿಕ ಗುರ್ಮೀತ್ ರಾಮ್ ರಹೀಮ್ ಸಿಂಗ್ ಕಟಕಟೆಯಲ್ಲಿಯೇ ಅಳುತ್ತಾ ಕುಸಿದು ಬಿದ್ದು ನಾಟಕವಾಡಿರುವ ಘಟನೆ ನಡೆದಿತ್ತು, ಬಳಿಕ ಕೋರ್ಟ್ ಹಾಲ್ ನಿಂದ ಹೊರಗೆ ಬರಲು ನಿರಾಕರಿಸಿದ್ದ. ಕೊನೆಗೆ ಪೊಲೀಸರು ರಾಮ್ ರಹೀಮ್ ನನ್ನು ಬಲವಂತವಾಗಿ ಕೋರ್ಟ್ ಹಾಲ್ ನಿಂದ ಹೊರಗೆ ಕರೆ ತಂದಿರುವುದಾಗಿ ವರದಿ ತಿಳಿಸಿದೆ.

ಸಿರ್ಸಾ ಆಶ್ರಮದಲ್ಲಿ 36 ಸಾವಿರ ಬೆಂಬಲಿಗರು:

ಸಿರ್ಸಾ ಆಶ್ರಮದಲ್ಲಿ ಸುಮಾರು 36ಸಾವಿರ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಜಮಾವಣೆಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.