100 ಲಕ್ಷ ಕೋ.ರೂ. ಯೋಜನೆ ಜಾರಿಗೆ ಕಾರ್ಯಪಡೆ
Team Udayavani, Sep 8, 2019, 6:01 AM IST
ಹೊಸದಿಲ್ಲಿ: ದೇಶದ ಆರ್ಥಿಕತೆ ಕುಸಿತವನ್ನು ನಿಯಂತ್ರಿಸಲು ಕೆಲವೇ ದಿನಗಳ ಹಿಂದೆ ಹಲವು ಘೋಷಣೆ ಮಾಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈಗ ಮುಂದಿನ 5 ವರ್ಷಗಳವರೆಗೆ ದೇಶದ ಮೂಲ ಸೌಕರ್ಯ ಯೋಜನೆಗಳ
ರೂಪುರೇಷೆಗೆ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ.
ಈಗಾಗಲೇ ಮೂಲ ಸೌಕರ್ಯಕ್ಕಾಗಿ 100 ಲಕ್ಷ ಕೋಟಿ ರೂ.ಗಳನ್ನು ನೀಡುವುದಾಗಿ ಕೇಂದ್ರ ಘೋಷಿಸಿದ್ದು, ಈ ಕಾರ್ಯ ಪಡೆಯು ಪ್ರಸ್ತುತ ಹಣಕಾಸು ವರ್ಷ, ಮುಂದಿನ 5 ವರ್ಷ ಕೈಗೊಳ್ಳಲಾಗುವ ಯೋಜನೆಗಳನ್ನು ಗುರುತಿಸಲಿದೆ. ತಾಂತ್ರಿಕವಾಗಿ, ಆರ್ಥಿಕವಾಗಿ ಸೂಕ್ತವಾದ ಯೋಜನೆಗಳನ್ನು ಗುರುತಿಸುವುದು, ಯೋಜನೆ ವೆಚ್ಚ ಅನಗತ್ಯ ವಾಗಿ ಹೆಚ್ಚಳವಾಗುವುದು, ವಿಳಂಬವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕಾರ್ಯಪಡೆ ರೂಪುರೇಷೆ ಸಿದ್ಧಪಡಿಸಲಿದೆ.
ಕಾರ್ಯಪಡೆಯಲ್ಲಿ ಯಾರಿರುತ್ತಾರೆ?
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ನೇತೃತ್ವ ವಹಿಸ ಲಿದ್ದು, ಇತರ ಅಧಿಕಾರಿಗಳು ಇರುವರು.
ಒಟ್ಟು ಆರು ಸದಸ್ಯರು ಈ ಕಾರ್ಯಪಡೆಯಲ್ಲಿ ಇರಲಿದ್ದಾರೆ. ಅ. 31ರ ವೇಳೆಗೆ ಈ ವರ್ಷದ ಯೋಜನೆಯನ್ನು ಒದಗಿಸಲಿದೆ ಮತ್ತು 2021-25ರ ರೂಪುರೇಷೆಯನ್ನು ಡಿ.31ರಂದು ನೀಡಲಿದೆ.
ಆರ್ಥಿಕತೆಯ ಗುರಿ
5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಸಾಧಿಸಲು ಗುಣಮಟ್ಟದ ಮೂಲಸೌಕರ್ಯ ಅತ್ಯಂತ ಪ್ರಮುಖ. ದೇಶದ ಅಭಿವೃದ್ಧಿ ದರ ಹೆಚ್ಚಳ ಕಾಣಲು ಮೂಲ ಸೌಕರ್ಯದಲ್ಲಿ ಹೂಡಿಕೆ ಮಾಡಬೇಕಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್