25 ದಿನಗಳಲ್ಲಿ ಶೇ.100ರಷ್ಟು ಗುಣ; ಕೇಂದ್ರ ಸರಕಾರದಿಂದಲೇ ಮಾಹಿತಿ ಪ್ರಕಟ


Team Udayavani, Aug 26, 2020, 5:20 AM IST

recovery

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಸೋಂಕಿನಿಂದ ಗುಣ ಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಸೋಮವಾರದಿಂದ ಮಂಗಳವಾರಕ್ಕೆ ಒಂದೇ ದಿನ 66,550 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ದೇಶದ ಗುಣಮುಖ ಪ್ರಮಾಣ ಶೇ.75.92ಕ್ಕೇರಿದೆ. ಕಳೆದ 25 ದಿನಗಳಲ್ಲಿ ಗುಣಮುಖ ಪ್ರಮಾಣದಲ್ಲಿ ಶೇ.100ಕ್ಕೂ ಹೆಚ್ಚು ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿನ ಸಕ್ರಿಯ ಸೋಂಕಿತರ ಪ್ರಮಾಣ ಶೇ.22. 24ರಷ್ಟಿದೆ. ಈ ಸಂಖ್ಯೆಗೆ ಹೋಲಿಸಿದರೆ ಗುಣ ಮು ಖರ ಪ್ರಮಾಣ ಇದಕ್ಕಿಂತ 3.41 ಪಟ್ಟು ಹೆಚ್ಚಿದೆ.

ಪಾಸಿಟಿವ್‌ ಸಂಖ್ಯೆ ಕಡಿಮೆ: ದೇಶಾದ್ಯಂತ ಸೋಂಕು ಪತ್ತೆ ಪರೀಕ್ಷೆಯನ್ನು ವ್ಯಾಪಕವಾಗಿ ಹೆಚ್ಚಿಸ ಲಾಗಿದೆ. ಇದರ ಜತೆಗೆ ಸೋಂಕು ಪಾಸಿಟಿವ್‌ ಆಗುವ ಪ್ರಕರಣಗಳು ಕಡಿಮೆಯಾ ಗಿವೆ. ಸೋಮ ವಾರದಿಂದ ಮಂಗಳವಾರದ ಅವಧಿಯಲ್ಲಿ ಈ ಅಂಶ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಖಾತೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

60,975 ಪ್ರಕರಣ ಪತ್ತೆ: ಈ ನಡುವೆ, ದೇಶದಲ್ಲಿ ಸೋಮವಾರದಿಂದ ಮಂಗಳವಾರಕ್ಕೆ 24 ಗಂಟೆಗಳ ಅವಧಿಯಲ್ಲಿ 60,975 ಮಂದಿಗೆ ಸೋಂಕು ದೃಢಪಟ್ಟಿದೆ. 848 ಮಂದಿ ಮೃತಪಟ್ಟಿದ್ದಾರೆ. ಮರಣ ಪ್ರಮಾಣವು ಶೇ.1.84ಕ್ಕಿಳಿಕೆಯಾಗಿದೆ ಎಂದು ಭೂಷಣ್‌ ತಿಳಿಸಿದ್ದಾರೆ.
ರಷ್ಯಾ ಜತೆಗೆ ಮಾತುಕತೆ: ಸೋಂಕು ತಡೆಗೆ ರಷ್ಯಾ ಅಭಿವೃದ್ಧಿಪಡಿಸಿರುವ “ಸ್ಪುಟ್ನಿಕ್‌-5′ ಲಸಿಕೆಯನ್ನು ಖರೀದಿಸುವ ಬಗ್ಗೆ ಮಾತುಕತೆಗಳು ನಡೆದಿವೆ. ರಷ್ಯಾ ಜತೆಗೆ ಪ್ರಾಥಮಿಕ ಮಾಹಿತಿ ಹಂಚಿ ಕೊಳ್ಳಲಾಗಿದೆ ಎಂದು ಆರೋಗ್ಯ ಕಾರ್ಯ ದರ್ಶಿ ತಿಳಿಸಿದ್ದಾರೆ.

ಮಾಸ್ಕ್ ಧರಿಸದವರೇ ಕಾರಣ: ಐಸಿಎಂಆರ್‌
ಸೋಂಕು ದೇಶ ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಲು ಮಾಸ್ಕ್ ಧರಿಸದೇ ಬೇಜವಾಬ್ದಾರಿ ಯುತವಾಗಿ ವರ್ತಿಸು ವವರೇ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌)ಯ ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಸೋಂಕು ವ್ಯಾಪಿಸಲು ಕಿರಿಯರು ಕಾರಣ, ಹಿರಿಯರು ಕಾರಣ ಎಂದು ನಾವು ಹೇಳುವುದಿಲ್ಲ. ಬದಲಿಗೆ, ಮಾಸ್ಕ್ ಧರಿಸದೇ ಸಾರ್ವಜನಿಕವಾಗಿ ಓಡಾಡುವವರು, ನಿರ್ಲಕ್ಷ್ಯ ವಹಿಸುವವರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ವ್ಯಾಪಿಸಿತು ಎಂದು ಐಸಿಎಂಆರ್‌ ಡಿಜಿ ಡಾ. ಬಲರಾಂ ಭಾರ್ಗವ ಹೇಳಿದ್ದಾರೆ. ಇದೇ ವೇಳೆ, ದೇಶದಲ್ಲಿ 3 ಲಸಿಕೆಗಳು ಮುಂಚೂಣಿಯಲ್ಲಿದ್ದು, ಮಾನವನ ಮೇಲಿನ ಪ್ರಯೋಗ ಪ್ರಕ್ರಿಯೆ ನಡೆಸಲಾಗುತ್ತಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.