1,000 ಮೆಗಾವ್ಯಾಟ್‌ ಸೌರಶಕ್ತಿ


Team Udayavani, Feb 2, 2020, 4:07 AM IST

100mega

ರೈಲ್ವೆ ಇಲಾಖೆಯಡಿ 2021-22ರ ವೇಳೆಗೆ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಸುಮಾರು 1,000 ಮೆಗಾವ್ಯಾಟ್‌ ಸೌರ ವಿದ್ಯುತ್‌ ಹಾಗೂ 200 ಮೆಗಾವ್ಯಾಟ್‌ ಪವನ ವಿದ್ಯುತ್‌ ಘಟಕಗಳ ಸ್ಥಾಪನೆ ನಿಟ್ಟಿನಲ್ಲಿ ಕೇಂದ್ರ ಆಯವ್ಯಯದಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ರೈಲ್ವೆ ಆಯವ್ಯಯ ಒಳಗೊಂಡ ಸಾಮಾನ್ಯ ಆಯವ್ಯಯದಲ್ಲಿ ಭಾರತೀಯ ರೈಲ್ವೆಯ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ.

ಇಲ್ಲಿಯವರೆಗೆ ರೈಲ್ವೆಗಳಲ್ಲಿ 100.99 ಮೆಗಾವ್ಯಾಟ್‌ ಸೌರ ಮತ್ತು 103.4 ಮೆಗಾವ್ಯಾಟ್‌ ಪವನ ವಿದ್ಯುತ್‌ ಘಟಕಗಳನ್ನು ಸ್ಥಾಪಿಸಲಾಗಿದೆ. ರೈಲುಗಳ ಸಂಚಾರಕ್ಕಾಗಿ ವಿದ್ಯುತ್‌ ಮತ್ತು ಡೀಸೆಲ್‌ ಬಳಸಲಾಗುತ್ತಿದೆ. 2018-19ರಲ್ಲಿ ರೈಲುಗಳ ಸಂಚಾರಕ್ಕಾಗಿ ಸುಮಾರು 18 ಶತಕೋಟಿ ಯುನಿಟ್‌ ವಿದ್ಯುತ್‌ (ದೇಶದ ಒಟ್ಟು ವಿದ್ಯುತ್‌ ಬಳಕೆಯ ಸುಮಾರು ಶೇ.1.27) ಮತ್ತು 3069.30 ಟನ್‌ ಕಿಲೋಲೀಟರ್‌ ಡೀಸೆಲ್‌ (2018-19ರಲ್ಲಿ) ಬಳಸಲಾಗಿದೆ.

ಶೇ.100 ವಿದ್ಯುದೀಕರಣ ಮತ್ತು ರೈಲುಗಳ ಸಂಖ್ಯೆ ಹೆಚ್ಚಳ ನಿಟ್ಟಿನಲ್ಲಿ ಸುಮಾರು 28-30 ಶತಕೋಟಿ ಯುನಿಟ್‌ ವಿದ್ಯುತ್‌ ಬಳಕೆ‌ ಅಂದಾಜಿಸಲಾಗಿದೆ. 2022-23ರ ವೇಳೆಗೆ 175 ಗೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನಾ ಘಟಕಗಳ ಸ್ಥಾಪನೆಗೆ ಯೋಜಿಸಲಾಗಿದೆ. ಸುಮಾರು 51,000 ಹೆಕ್ಟೇರ್‌ ರೈಲ್ವೆ ಭೂಮಿ ಲಭ್ಯವಿದ್ದು, ಅಗತ್ಯವಿದ್ದ ಕಡೆ ಘಟಕ ಸ್ಥಾಪಿಸಲಾಗುತ್ತದೆ. ಸೌರಶಕ್ತಿಯನ್ನು ಸಿಟಿಯು/ಎಸ್‌ಟಿಯು ಗ್ರಿಡ್‌ಗೆ ಅಥವಾ ನೇರವಾಗಿ 25 ಕೆವಿ ಎಸಿ ಬೋಗಿಗಳ ವ್ಯವಸ್ಥೆಗೆ ನೀಡಲಾಗುತ್ತದೆ.

5 ಕೆವಿಎ ಸಾಮರ್ಥಯದ 25 ಕೆವಿ ಎಸಿ ಎಳೆತ ವ್ಯವಸ್ಥೆಗೆ ನೇರವಾಗಿ ಸೌರಶಕ್ತಿ ನೀಡುವ ಪರಿಕಲ್ಪನೆಯನ್ನು ಈಗಾಗಲೇ ಪರೀಕ್ಷಿಸಲಾಗಿದೆ. ಇದಲ್ಲದೆ ದಿವಾನಾ (ಹರಿಯಾಣ)ದಲ್ಲಿ 2 ಮೆಗಾವ್ಯಾಟ್‌ ಮತ್ತು ಬೈನಾ (ಎಂಪಿ)ದಲ್ಲಿ 1.7 ಮೆಗಾವ್ಯಾಟ್‌ನ 2 ಪೈಲಟ್‌ ಯೋಜನೆಗಳು ಕಾರ್ಯಗತಗೊಳಿಸುವ ವಿವಿಧ ಹಂತಗಳಲ್ಲಿದೆ ಮತ್ತು 2020ರ ಮಾರ್ಚ್‌ದೊಳಗೆ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.

ಭಾರತೀಯ ರೈಲ್ವೆ 50 ಮೆಗಾವ್ಯಾಟ್‌ ಲ್ಯಾಂಡ್‌ ಸೌರ ವಿದ್ಯುತ್‌ ಸ್ಥಾವರವನ್ನು ಛತ್ತೀಸಗಡದ ಬಿಲಾಯಿಯಲ್ಲಿ ಸ್ಥಾಪಿಸುತ್ತಿದ್ದು, ಇದು 2021ರ ಜನವರಿ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. 400 ಮೆಗಾವ್ಯಾಟ್‌ ಸೌರಶಕ್ತಿಯನ್ನು ಮಧ್ಯಪ್ರದೇಶದ ಜೆವಿ ಉರ್ಜಾ ವಿಕಾಸ ನಿಗಮ್‌ ಲಿಮಿಟೆಡ್‌ ಮತ್ತು ಸೌರಶಕ್ತಿ ನಿಗಮ (ಎಸ್‌ಇಸಿಐ) ಮೂಲಕ ರೇವಾ ಅಲ್ಟ್ರಾ ಮೆಗಾ ಸೋಲಾರ್‌ ಲಿಮಿಟೆಡ್‌ ಮೂಲಕ ಸ್ಥಾಪಿಸಲು ಮುಂದಾಗಿದೆ. ಇದಕ್ಕಾಗಿ 2020ರ ಜೂನ್‌ದಲ್ಲಿ ಟೆಂಡರ್‌ ಕರೆಯಲಾಗುತ್ತಿದ್ದು, ರೈಲ್ವೆ ನಿಲ್ದಾಣಗಳಲ್ಲಿ ಮೇಲ್ಛಾವಣಿಯ ಸೌರ ಸ್ಥಾವರಗಳನ್ನು ಸ್ಥಾಪಿಸಲಾಗುತ್ತಿದೆ. 245 ಮೆಗಾವ್ಯಾಟ್‌ನ ಸೌರ ಸ್ಥಾವರಗಳು ವಿವಿಧ ಹಂತಗಳಲ್ಲಿ ಕಾರ್ಯಗತಗೊಳ್ಳುತ್ತಿವೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.