107 ಶಾಸಕರು ಬಿಜೆಪಿಗೆ?
Team Udayavani, Jul 15, 2019, 5:00 AM IST
ಕೋಲ್ಕತಾ: ಕರ್ನಾಟಕ ಹಾಗೂ ಗೋವಾದ ಬಳಿಕ ಈಗ ಪಶ್ಚಿಮ ಬಂಗಾಲದಲ್ಲಿ ಆಪರೇಷನ್ ಕಮಲದ ಭೀತಿ ಶುರುವಾಗಿದೆ. ಸದ್ಯದಲ್ಲೇ ಕಾಂಗ್ರೆಸ್, ಟಿಎಂಸಿ ಹಾಗೂ ಸಿಪಿಎಂನ 107 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ನಾಯಕ ಮುಕುಲ್ ರಾಯ್ ಘೋಷಿಸಿದ್ದಾರೆ. ಕರ್ನಾಟಕದ ರಾಜಕೀಯ ಬಿಕ್ಕಟ್ಟು ಹಾಗೂ ಗೋವಾದ ಬೆಳವಣಿಗೆಗಳ ನಡುವೆಯೇ ರಾಯ್ ನೀಡಿರುವ ಈ ಹೇಳಿಕೆ ವಿಪಕ್ಷಗಳಲ್ಲಿ ನಡುಕ ಹುಟ್ಟಿಸಿದೆ. ನಾವು ಈಗಾಗಲೇ ಪಟ್ಟಿ ತಯಾರಿಸಿದ್ದೇವೆ. ಎಲ್ಲ 107 ಶಾಸಕರೂ ನಮ್ಮ ಸಂಪರ್ಕದಲ್ಲಿದ್ದಾರೆ ಎಂದೂ ತಿಳಿಸಿದ್ದಾರೆ. ಆದರೆ, ಯಾವಾಗ ಈ ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ಮಾಹಿತಿ ನೀಡಿಲ್ಲ. ಇತ್ತೀಚೆ ಗಷ್ಟೇ ಮೂವರು ಶಾಸಕರು ಹಾಗೂ ಟಿಎಂಸಿಯ 50 ಕೌನ್ಸಿಲರ್ಗಳು ಬಿಜೆಪಿಗೆ ಸೇರಿದ್ದರು. 3 ದಿನಗಳ ಹಿಂದಷ್ಟೇ ಗೋವಾದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರೆ, ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ನ 16 ಶಾಸಕರು ರಾಜೀನಾಮೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ