ಕೋವಿಡ್ ಹಿನ್ನೆಲೆ : ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು!
Team Udayavani, Apr 15, 2021, 9:07 PM IST
ಚಂಡೀಗಢ : ಕೋವಿಡ್ ಸೋಂಕಿನ ಹರಡುವಿಕೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರ 10ನೇ ತರಗತಿಯ ಪರೀಕ್ಷೆಗಳನ್ನು ಗುರುವಾರ ರದ್ದುಗೊಳಿಸಿದ್ದು, 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಕನ್ವರ್, ಹರಿಯಾಣದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೇ ಹಿನ್ನೆಲೆಯಲ್ಲಿ ಸಿಬಿಎಸ್ ಸಿ ಕೈಗೊಂಡ ನಿರ್ಧಾರವನ್ನು ಹರಿಯಾಣ ಸರ್ಕಾರವೂ ಅನುಸರಿಸಿದೆ ಎಂದಿದ್ದಾರೆ.
ಇದೇ ವೇಳೆ ಮತ್ತೊಂದು ಮಾಹಿತಿಯನ್ನು ತಿಳಿಸಿರುವ ಅವರು, ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ 10ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.
ಇನ್ನು ಹರಿಯಾಣದಲ್ಲಿ ಪ್ರೌಢಶಿಕ್ಷಣ ಮಂಡಳಿಯ ಪರೀಕ್ಷೆಗಳು ಏಪ್ರಿಲ್ ನಲ್ಲಿ ಶುರುವಾಗಿ ಮೇ ತಿಂಗಳ ಮಧ್ಯಭಾಗದಲ್ಲಿ ಮುಕ್ತಾಯವಾಗಬೇಕಿತ್ತು. ಸಿಬಿಎಸ್ಸಿಯು ಇದೇ ಮೊದಲ ಬಾರಿಗೆ ಬೋರ್ಡ್ ಪರೀಕ್ಷೆಗಳನ್ನು ಪೂರ್ಣಪ್ರಮಾಣದಲ್ಲಿ ರದ್ದುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ