ಉದ್ವಿಗ್ನ ಸ್ಥಿತಿ ನಿರ್ಮಾಣ:ಶಬರಿಮಲೆಯಿಂದ 11 ಮಹಿಳೆಯರು ವಾಪಾಸ್
Team Udayavani, Dec 23, 2018, 10:20 AM IST
ತಿರುವನಂತಪುರ: 11 ಮಂದಿ 50 ವರ್ಷದ ಒಳಗಿನ ಮಹಿಳೆಯರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಳ ಪ್ರವೇಶಕ್ಕೆ ಮುಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಬಳಿಕ ವಾಪಾಸಾದ ಘಟನೆ ಭಾನುವಾರ ನಡೆದಿದೆ.
ಚೆನ್ನೈ ಮೂಲದ ಮಾನಿಥಿ ಎಂಬ ಸಂಘಟನೆಯ 11 ಮಂದಿ ಸದಸ್ಯೆಯರು ಕಪ್ಪು ಬಣ್ಣದ ವಸ್ತ್ರಧಾರಿಗಳಾಗಿ ಮಾಲಾಧಾರಿಗಳಂತೆಯೇ ದೇವಾಲಯವನ್ನು ಪ್ರವೇಶಿಸಲು ಪಂಪೆಯಿಂದ ಪಾದಯಾತ್ರೆ ಕೈಗೊಂಡಿದ್ದರು .
ಪೊಲೀಸರ ಭದ್ರಕೋಟೆಯಲ್ಲಿ ಸುಮಾರು 5 ಕಿ.ಮೀ ರಸ್ತೆಯಲ್ಲಿ ಪಾದಾಯಾತ್ರೆ ನಡೆಸಿದರು. ಈ ವೇಳೆ ಭಕ್ತರ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವರು ಘೋಷಣೆಗಳನ್ನು ಕೂಗಿ ದೇವಾಲಯದತ್ತ ಬರದಂತೆ ಬೆದರಿಕೆ ಹಾಕಿದ್ದಾರೆ. ನೂರಾರು ಸಂಖ್ಯೆಯಲ್ಲಿ ಭಕ್ತರು ರೊಚ್ಚಿಗೆದ್ದ ಹಿನ್ನಲೆಯಲ್ಲಿ ಮಹಿಳೆಯರು ಪಂಪೆಯಿಂದ ವಾಪಾಸಾಗಲು ನಿರ್ಧರಿಸಿದರು.
ಮಹಿಳೆಯರಿಗೆ ಪೊಲೀಸರು ಕೋಟೆ ಮಾದರಿಯಲ್ಲಿ ಭದ್ರತೆಯನ್ನು ಒದಗಿಸಿದ್ದರು. ಆದರೂ ಕೆಲವರು ರೊಚ್ಚಿಗೆದ್ದು ಮಹಿಳೆಯರ ಮೇಲೆ ದಾಳಿಗೆ ಮುಂದಾಗಿದ್ದಾರೆ.
ಶಬರಿ ಮಲೆಯ ಅಯ್ಯಪ್ಪ ಸ್ವಾಮಿ ದೇವಳಕ್ಕೆ 10 ರಿಂದ 50 ವಯೋಮಿತಿ ಸಹಿತ ಎಲ್ಲ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ಆ ಬಳಿಕ ಮಹಿಳೆಯರು ದೇವಾಲಯ ಪ್ರವೇಶಿಸಬಾರದು ಎಂದು ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.