ತೆಲಂಗಾಣದಲ್ಲಿ ಕೈಗೆ ತೀವ್ರ ಮುಖಭಂಗ; 12 “ಕೈ” ಶಾಸಕರು TRS ಪಾಳಯಕ್ಕೆ?
Team Udayavani, Jun 6, 2019, 3:54 PM IST
ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿದ ಮೇಲೆ ಇದೀಗ ತೆಲಂಗಾಣದಲ್ಲಿ 12 ಮಂದಿ ಕಾಂಗ್ರೆಸ್ ಶಾಸಕರು ತೆಲಂಗಾಣ ಸ್ಪೀಕರ್ ಪಿ.ಶ್ರೀನಿವಾಸ್ ರೆಡ್ಡಿ ಅವರನ್ನು ಭೇಟಿಯಾಗಿ ಸಿಎಲ್ ಪಿ(ಕಾಂಗ್ರೆಸ್ ಲೆಜಿಸ್ಲೇಚರ್ ಪಾರ್ಟಿ)ಯಿಂದ ಆಡಳಿತಾರೂಢ ಟಿಆರ್ ಎಸ್ ಜೊತೆ ವಿಲೀನವಾಗುವ ಬಗ್ಗೆ ನಿವೇದನಾ ಪತ್ರವನ್ನು ಸಲ್ಲಿಸಿದ್ದಾರೆ.
119 ಮಂದಿ ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 18 ಆಗಿದೆ. ಕಾಂಗ್ರೆಸ್ ಪಕ್ಷದ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷ, ಶಾಸಕ ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ನೀಡಿ , ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ನಲಗೊಂಡಾದಿಂದ ಆಯ್ಕೆಯಾಗಿದ್ದರು.
ಸದ್ಯ 18 ಸದಸ್ಯ ಬಲದ ಕಾಂಗ್ರೆಸ್ ನ 12 ಮಂದಿ ಶಾಸಕರು ಟಿಆರ್ ಎಸ್ ಸೇರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಒಂದು ವೇಳೆ ಸ್ಪೀಕರ್ ಈ ಮನವಿಯನ್ನು ಸ್ವೀಕರಿಸಿದರೆ, ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನೂ ಕಳೆದುಕೊಳ್ಳಲಿದೆ. ಏತನ್ಮಧ್ಯೆ ಟಿಆರ್ ಎಸ್ ಗೆ ಸೇರ್ಪಡೆಗೊಳ್ಳುವ ಕಾಂಗ್ರೆಸ್ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ