ಹುಚ್ಚು ಸಾಹಸ; ವಿಡಿಯೋ ನೋಡಿ ತಲೆ ಕೂದಲಿಗೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ… ನಡೆದಿದ್ದೇನು?
ಈತ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...
Team Udayavani, Mar 26, 2021, 2:52 PM IST
ನವದೆಹಲಿ: ತಮ್ಮ ಅಂದವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ಜನರು ನಾನಾ ವಿಧವಾದ ಸರ್ಕಸ್ ಗಳನ್ನು ಮಾಡುತ್ತಾರೆ. ಇನ್ನೂ ಕೆಲವರು ತಮ್ಮ ಅಂದವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹುಚ್ಚು ಸಾಹಸಗಳಿಗೆ ಕೈ ಹಾಕುವ ಮೂಲಕ ತಮ್ಮ ಜೀವಕ್ಕೆ ಕಂಟಕವನ್ನು ತಂದುಕೊಳ್ಳುತ್ತಾರೆ. ಅಂತದ್ದೆ ಒಂದು ಘಟನೆ ಕೇರಳದಲ್ಲಿ ನಡೆದಿದೆ.
12 ವರ್ಷದ ಹುಡುಗನೊಬ್ಬ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ಒಂದರಿಂದ ಪ್ರಭಾವಿತನಾಗಿ ಸೀಮೆ ಎಣ್ಣೆಯನ್ನು ತಲೆಗೆ ಸುರಿದುಕೊಂಡು ಬೆಂಕಿ ಹಚ್ಚುಕೊಳ್ಳುವ ಮೂಲಕ ತನ್ನ ತಲೆಕೂದಲನ್ನು ಸ್ಟ್ರೈಟಿಂಗ್ ಮಾಡಿಕೊಳ್ಳಲು ಹೋಗಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ.
ಮೃತ ಹುಡುಗನನ್ನು ಶಿವನಾರಾಯಣನ್ ಎಂದು ಗುರುತಿಸಲಾಗಿದ್ದು, ಈತ ತಿರುವನಂತಪುರಂ ಬಳಿ ಇರುವ ವೆಂಗನೂರಿನವನು ಎಂದು ತಿಳಿದು ಬಂದಿದೆ. ಈತ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ತೊಡಗಿಕೊಂಡಿದ್ದ ಎನ್ನಲಾಗಿದೆ.
ಇದನ್ನೂ ಓದಿ:ವಂಚಕರ ಬಗ್ಗೆ ತನ್ನ ಗ್ರಾಹಕರಿಗೆ ಟ್ವಿಟರ್ ಮೂಲಕ ಎಸ್ ಬಿ ಐ ಎಚ್ಚರಿಕೆ
ಘಟನೆಯ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸರು ಈತ ತನ್ನ ತಲೆ ಕೂದಲನ್ನು ಸ್ಟ್ರೈಟಿಂಗ್ ಮಾಡಿಕೊಳ್ಳುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ನೋಡಿದ್ದು, ಅದರ ಅನ್ವಯ ಮನೆಯ ಬಾತ್ ರೂಂ ನಲ್ಲಿ ಬಾಗಿಲು ಹಾಕಿಕೊಂಡು ತನ್ನ ತಲೆ ಕೂದಲಿಗೆ ಸೀಮೆ ಎಣ್ಣೆಯನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ . ಇದರಿಂದ ಆತನ ದೇಹಕ್ಕೆ ಬೆಂಕಿ ತಗುಲಿದೆ ಎಂದಿದ್ದಾರೆ.
ಈ ಸಮಯದಲ್ಲಿ ಮನೆಯಲ್ಲಿ ಆತನ ಅಜ್ಜಿ ಮಾತ್ರ ಇದ್ದು. ಘಟನೆ ನಡೆದ ತಕ್ಷಣ ಆತನನ್ನು ರಕ್ಷಿಸಲು ಕೂಡಾ ಸಾಧ್ಯವಾಗಿಲ್ಲ. ತದನಂತರ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸುಟ್ಟ ಗಾಯಗಳಿಂದಾಗಿ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ