ಕೊರೊನಾ ಕಂಟಕ: ಇರಾನ್ ನಿಂದ 120 ಭಾರತೀಯರನ್ನು ಕರೆತರಲಿರುವ ಏರ್ ಇಂಡಿಯಾ ವಿಮಾನ
Team Udayavani, Mar 13, 2020, 9:00 AM IST
ನವದೆಹಲಿ: ಕೊರೊನಾಘಾತಕ್ಕೆ ಸಿಲುಕಿರುವ ಇರಾನ್ ನಿಂದ 120 ಭಾರತೀಯರು ಇಂದು(ಶುಕ್ರವಾರ) ಏರ್ ಇಂಡಿಯಾ ವಿಮಾನದ ಮೂಲಕ ಭಾರತಕ್ಕೆ ಮರಳಲಿದ್ದಾರೆ. ಇವರನ್ನು ರಾಜಸ್ಥಾನದ ಜೈಸಲ್ಮೇರ್ ನಲ್ಲಿ ನಿರ್ಮಿಸಲಾಗಿರುವ ಸೇನಾ ಕೇಂದ್ರದ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುವುದು ಎಂದು ಮಾಧ್ಯಮದ ವರದಿ ತಿಳಿಸಿದೆ.
120 ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು. ನಂತರ ಭಾರತೀಯ ಸೇನೆಯ ಜೈಸಲ್ಮೇರ್ ಕೇಂದ್ರದಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗುವುದು ಎಂದು ರಕ್ಷಣಾ ವಕ್ತಾರ ಕರ್ನಲ್ ಸೋಂಬಿತ್ ಘೋಷ್ ತಿಳಿಸಿದ್ದಾರೆ.
ಮಾರ್ಚ್ 14 ರಂದು ಉಳಿದ 250 ಜನರು ಇರಾನ್ ನಿಂದ ಭಾರತಕ್ಕೆ ಕರೆತರಲಾಗುದು. ಇವರನ್ನು ಕೂಡ ಜೈಸಲ್ಮೇರ್ ಕೇಂದ್ರದಲ್ಲೆ ತಪಾಸಣೆಗೊಳಪಡಿಸಲಾಗುವುದು ಎಂದು ವರದಿ ತಿಳಿಸಿದೆ
ಭಾರತದ ರಕ್ಷಣಾ ಸಚಿವಾಲಯ ಈಗಾಗಲೇ ಕೊರೊನಾ ಮಹಾಮಾರಿ ಆವರಿಸಿರುವ ದೇಶಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನದಲ್ಲಿದೆ. ಮಾತ್ರವಲ್ಲದೆ ಇವರ ರಕ್ಷಣೆಗಾಗಿ ಜೋಧ್ ಪುರ್, ಜಾನ್ಸಿ, ಕೊಲ್ಕತ್ತಾ, ಚೆನ್ನೈ, ಸೂರತ್ ಘಢ್, ಮುಂತಾದ ಕಡೆ ವಿಶೇಷ ಕೇಂದ್ರಗಳನ್ನು ತೆರಯಲಾಗಿದೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಈ ಕುರಿತು ಪ್ರತಿಕ್ರಿಯಿಸಿ, ಇರಾನ್ ನಿಂದ ಕರೆತರಲಾಗುವ ಭಾರತೀಯರ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಲಾಗುವುದು. ಮಹರಾಷ್ಟ್ರ ಮತ್ತು ಜಮ್ಮು ಕಾಶ್ಮೀರದ 1100 ಯಾತ್ರಿಗಳು ಸೇರಿದಂತೆ ಇರಾನ್ ನಲ್ಲಿ 6,000 ಭಾರತೀಯರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ