ರಾಜಸ್ಥಾನ : ಮದುವೆ ಮೆರವಣಿಗೆ ಮೇಲೆ ಲಾರಿ ಹರಿದು 13 ಸಾವು
Team Udayavani, Feb 19, 2019, 4:23 AM IST
ಜೈಪುರ: ಮದುವೆ ಸಂಭ್ರಮಕೂಟದ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಲಾರಿ ಹರಿದು 13 ಜನ ಸಾವಿಗೀಡಾಗಿ 18 ಜನ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರಲ್ಲಿ ನಾಲ್ಕು ಜನ ಮಕ್ಕಳೂ ಸೇರಿದ್ದಾರೆ. ಲಾರಿ ಚಾಲಕನಿಗೆ ಮೆರವಣಿಗೆ ಸಾಗಿ ಬರುತ್ತಿದ್ದುದು ಅರಿವಿಗೆ ಬರದಿದ್ದುದೇ ಈ ದುರ್ಘಟನೆಗೆ ಕಾರಣವೆನ್ನಲಾಗುತ್ತಿದೆ.
ಇಲ್ಲಿನ ರಾಜ್ಯ ಹೆದ್ದಾರಿ – 113ರಲ್ಲಿರುವ ರಾಮದೇವ್ ದೇವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಮದುವೆ ಸಂಭ್ರಮಕೂಟದ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಈ ಮಾರ್ಗವಾಗಿ ವೇಗವಾಗಿ ಸಾಗಿಬಂದ ಲಾರಿಯೊಂದು ನೋಡನೋಡುತ್ತಿದ್ದಂತೆಯೇ ಸಂಭ್ರಮದಲ್ಲಿ ಮೆರವಣಿಗೆ ಸಾಗುತ್ತಿದ್ದವರ ಮೇಲೆ ಏರಿಬಂತು. ಬಳಿಕ ಕ್ಷಣಾರ್ಧದಲ್ಲಿ ಆ ಸ್ಥಳ ರಕ್ತದೋಕುಳಿಯ ಕಣವಾಗಿ ಮಾರ್ಪಾಡಾಯಿತು. ಎಲ್ಲೆಲ್ಲೂ ನರಳಾಟ, ಚೀರಾಟಗಳೇ ಕೇಳಿಬರಲಾರಂಭಿಸಿದವು. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಸಮೀಪದಲ್ಲಿದ್ದ ವಿವಿಧ ಅಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉದಯಪುರದಲ್ಲಿರುವ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯ ಕುರಿತಾದಂತೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
Deeply saddened to hear about the tragic accident on NH-113 in Chhoti Sadri, #Pratapgarh in which many people have lost their lives and several have been injured. My heartfelt condolences to the grieved families. I pray for speedy recovery of injured people.#Rajasthan
— Ashok Gehlot (@ashokgehlot51) February 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ