13 ವರ್ಷದ ಬಾಲಕಿಯನ್ನು ಅಪಹರಿಸಿ 36 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ!
ದಾನಾರ್ ತನ್ನ ಇಬ್ಬರು ಗೆಳೆಯರನ್ನು ಕರೆಯಿಸಿಕೊಂಡು ಬಾಲಕಿಯನ್ನು ಅಪಹರಿಸಿ ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದ
Team Udayavani, Jan 13, 2020, 7:34 PM IST
ಒಡಿಶಾ: 13 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ನಂತರ 36 ಗಂಟೆಗಳ ಕಾಲ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಗಂಜಾಮ್ ಜಿಲ್ಲೆಯ ಬೆಹ್ರಾಮ್ ಪುರ್ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜನವರಿ 10ರಂದು 8ನೇ ತರಗತಿ ವಿದ್ಯಾರ್ಥಿನಿ ಸ್ಥಳೀಯ ಯುವಕ ದಾನಾರ್ ಬಳಿ ತೆರಳಿದ್ದಳು. ಆ ಸಂದರ್ಭದಲ್ಲಿ ಆತ ತನ್ನೊಂದಿಗೆ ಬರುವಂತೆ ಒತ್ತಾಯಿಸಿದ್ದ. ಈತ ಕಾಲೇಜಿಗೆ ಹೋಗುವ ವಿದ್ಯಾರ್ಥಿಯಾಗಿದ್ದು, ಆತನ ಪರಿಚಯ ಇತ್ತು. ಆದರೆ ಬಾಲಕಿ ಆತನ ಜತೆ ಹೋಗಲು ನಿರಾಕರಿಸಿದ್ದಳು ಎಂದು ವರದಿ ತಿಳಿಸಿದೆ.
ಆಕೆ ನಿರಾಕರಿಸಿದ ನಂತರ ದಾನಾರ್ ತನ್ನ ಇಬ್ಬರು ಗೆಳೆಯರನ್ನು ಕರೆಯಿಸಿಕೊಂಡು ಬಾಲಕಿಯನ್ನು ಅಪಹರಿಸಿ ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದರು. ಅವರು ಆಕೆಗೆ ಕುಡಿಯಲು ತಂಪು ಪಾನೀಯ ನೀಡಿದ್ದರು. ನಂತರ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಬೆಹ್ರಾಮ್ ಪುರ್ ಪೊಲೀಸ್ ವರಿಷ್ಠಾಧಿಕಾರಿ ಪಿನಾಲ್ ಮಿಶ್ರಾ ತಿಳಿಸಿದ್ದಾರೆ.
ಸುಮಾರು 36ಗಂಟೆಗಳ ಕಾಲ ಒತ್ತೆಯಾಳನ್ನಾಗಿ ಇರಿಸಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ. ನಂತರ ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆರೋಪಿಗಳು ಮನೆ ಸಮೀಪ ಎಸೆದು ಹೋಗಿರುವುದಾಗಿ ಮಿಶ್ರಾ ವಿವರಿಸಿದ್ದಾರೆ.
ಆರೋಪಿಗಳ ವಿರುದ್ಧ ಪೋಸ್ಕೋ ಹಾಗೂ ಐಪಿಸಿ ಪ್ರಕಾರ ದೂರು ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ದಾನಾರ್ ಸೇರಿದಂತೆ ಮೂವರನ್ನು ಬಂಧಿಸಬೇಕಾಗಿದೆ. ಸಂತ್ರಸ್ತೆಯ ವೈದ್ಯಕೀಯ ವರದಿ ಬಂದ ನಂತರ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ