Vishwakarma Yojana: ವಿಶ್ವಕರ್ಮ ಯೋಜನೆಗೆ 13,000 ಕೋ.ರೂ.: ಅಶ್ವಿನಿ ವೈಷ್ಣವ್
Team Udayavani, Aug 17, 2023, 12:21 AM IST
ಹೊಸದಿಲ್ಲಿ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗಾಗಿ ಕೇಂದ್ರ ಸಚಿವ ಸಂಪುಟವು ಬುಧವಾರ 13,000 ಕೋಟಿ ರೂ.ಗಳಿಗೆ ಅನುಮೋದನೆ ನೀಡಿದೆ. ಇದರಿಂದ ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಅಗಸರು, ಕ್ಷೌರಿಕರು ಸೇರಿದಂತೆ ಸುಮಾರು 30 ಲಕ್ಷ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಉಪಯೋಗವಾಗಲಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ನೂತನ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯಡಿಯಲ್ಲಿ ಕುಶಲಕರ್ಮಿಗಳಿಗೆ ಶೇ.5ರ ಬಡ್ಡಿಯಲ್ಲಿ ಮೊದಲ ಹಂತದಲ್ಲಿ 1 ಲಕ್ಷ ರೂ. ಸಾಲ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ರೂ. ಸಾಲ ದೊರೆಯಲಿದೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಡಿಜಿಟಲ್ ಇಂಡಿಯಾ: ಡಿಜಿಟಲ್ ಇಂಡಿಯಾ ಯೋಜನೆಯ ಮುಂದುವರಿಕೆಗಾಗಿ 14,903 ಕೋಟಿ ರೂ.ಗಳಿಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯಡಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ 2.65 ಲಕ್ಷ ಮಂದಿಗೆ ತರಬೇತಿ ನೀಡಲಾಗುತ್ತದೆ ಹಾಗೂ 5.25 ಲಕ್ಷ ಟೆಕಿಗಳಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ವೈಷ್ಣವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!