Dengue: ಉತ್ತರ ಪ್ರದೇಶದಲ್ಲಿ 13,000 ಡೆಂಗ್ಯೂ ಪ್ರಕರಣ… 24 ಮಂದಿ ಮೃತ್ಯು, ಹೆಚ್ಚಿದ ಆತಂಕ
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 600 ಹೊಸ ಪ್ರಕರಣಗಳು ಪತ್ತೆ
Team Udayavani, Oct 19, 2023, 9:06 AM IST
ಲಕ್ನೋ: ಹವಾಮಾನ ವೈಪರೀತ್ಯದಿಂದ ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.
ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಇದುವರೆಗೆ 24 ಮಂದಿ ಡೆಂಗ್ಯೂನಿಂದ ಮೃತಪಟ್ಟಿರುವುದಾಗಿ ವರದಿ ನೀಡಿದ್ದು ಆದರೆ ಖಾಸಗಿ ಆಸ್ಪತ್ರೆಗಳ ದತ್ತಾಂಶವನ್ನೂ ಸೇರಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗಿದೆ.
ಸ್ಥಳೀಯ ಆಸ್ಪತ್ರೆಗಳು ಅನೇಕ ಡೆಂಗ್ಯೂ ರೋಗಿಗಳನ್ನು ದಾಖಲಿಸಿಕೊಂಡಿವೆ ಮತ್ತು ಪ್ರತಿದಿನ ಹೊಸ ಪ್ರಕರಣಗಳಿಗೆ ಸಾಕ್ಷಿಯಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 13,000 ದಾಟಿದ್ದು ಲಕ್ನೋ, ಮೊರಾದಾಬಾದ್, ಮೀರತ್, ಕಾನ್ಪುರ ಮತ್ತು ನೋಯ್ಡಾ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಅಷ್ಟುಮಾತ್ರವಲ್ಲದೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 600 ಹೊಸ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.
ಹವಾಮಾನ ವೈಪರೀತ್ಯದಿಂದ ಮುಂದಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಳ
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವ ಬ್ರಜೇಶ್ ಪಾಠಕ್ ಅವರು ಎಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಸೂಚನೆಗಳನ್ನು ನೀಡಿದ್ದಾರೆ. ಇದಲ್ಲದೆ, ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ರೋಗಿಗಳಿಗೆ ಪ್ರತ್ಯೇಕ ವಾರ್ಡ್ಗಳನ್ನು ರಚಿಸುವಂತೆ ಹೇಳಿಕೊಂಡಿದ್ದಾರೆ.
ಲಕ್ನೋದಲ್ಲಿರುವ ಆಸ್ಪತ್ರೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಡೆಂಗ್ಯೂ ರೋಗಿಗಳಿಗೆ ಡಯಾಲಿಸಿಸ್ ಮತ್ತು ವೆಂಟಿಲೇಟರ್ ಬೆಂಬಲದ ಅಗತ್ಯವಿದೆ. ಪ್ರಮುಖ ಆಸ್ಪತ್ರೆಗಳ ಎಲ್ಲಾ ಹಾಸಿಗೆಗಳು ಡೆಂಗ್ಯೂ ರೋಗಿಗಳಿಂದ ತುಂಬಿವೆ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Bagalakote: ಕಾಣೆಯಾಗಿದ್ದ ಲಾಯರ್ ಶವವಾಗಿ ಪತ್ತೆ… ಕಲ್ಲಿನಿಂದ ಜಜ್ಜಿ ಕೊಂದಿರುವ ಶಂಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ