Flash Flood: ಜಲಪ್ರಳಯಕ್ಕೆ ನಲುಗಿದ ಸಿಕ್ಕಿಂ: 14 ಮೃತ್ಯು, 23ಯೋಧರ ಸಹಿತ 102ಮಂದಿ ನಾಪತ್ತೆ


Team Udayavani, Oct 5, 2023, 8:19 AM IST

Flash Flood: ಜಲಪ್ರಳಯಕ್ಕೆ ನಲುಗಿದ ಸಿಕ್ಕಿಂ: 14 ಮೃತ್ಯು, 23ಯೋಧರ ಸಹಿತ 102ಮಂದಿ ನಾಪತ್ತೆ

ಗ್ಯಾಂಗ್ಟಕ್‌: ಮೇಘ ಸ್ಫೋಟ ಹಾಗೂ ಅಣೆಕಟ್ಟಿನಿಂದ ಏಕಾಏಕಿ ನೀರು ಬಿಡುಗಡೆ ಮಾಡಿದ ಕಾರಣ ಸಿಕ್ಕಿಂನಲ್ಲಿ ಮಂಗಳವಾರ ತಡರಾತ್ರಿ ದಿಢೀರ್‌ ಪ್ರವಾಹ ಸೃಷ್ಟಿಯಾಗಿದ್ದು, ರಾತ್ರಿ ಬೆಳಗಾಗುವುದರೊಳಗೆ 23 ಯೋಧರು ಸಹಿತ 102 ಮಂದಿ ನಾಪತ್ತೆಯಾಗಿ, 14 ಮಂದಿ ಮೃತಪಟ್ಟಿದ್ದಾರೆ. ಕ್ಷಣ ಮಾತ್ರದಲ್ಲಿ ಸೇತುವೆಗಳು, ವಾಹನಗಳು, ಮನೆ- ಕಟ್ಟಡಗಳು ಕೊಚ್ಚಿ ಹೋಗಿದ್ದು, ಈ ದುರಂತವನ್ನು ಸಿಕ್ಕಿಂ ಸರಕಾರ “ವಿಪತ್ತು’ ಎಂದು ಘೋಷಿಸಿದೆ.

ಲ್ಹೋನಾಕ್‌ ಲೇಕ್‌ ಪರಿಸರದಲ್ಲಿ ಸುರಿದ ಭಾರೀ ಮಳೆಯಿಂದ ಮಂಗಳವಾರ ತಡರಾತ್ರಿ 1.30ಕ್ಕೆ ತೀಸ್ತಾ ನದಿಯಲ್ಲಿ ಪ್ರವಾಹ
ಉಂಟಾಗಿತ್ತು. ಇದೇ ಸಮಯದಲ್ಲಿ ಚುಂಗ್‌ಥಾಂಗ್‌ ಅಣೆಕಟ್ಟಿನಿಂದ ನೀರನ್ನೂ ಬಿಡುಗಡೆ ಮಾಡಿದ್ದು ಪರಿಸ್ಥಿತಿಯನ್ನು ಮತ್ತಷ್ಟು ಬಿಗ ಡಾಯಿಸಿತು. ನೀರಿನ ಮಟ್ಟವು ಕ್ಷಣಮಾತ್ರದಲ್ಲಿ 15-20 ಅಡಿ ಏರಿ, ಸುತ್ತಮುತ್ತಲಿನ ಪ್ರದೇಶಗಳನ್ನು ಕಬಳಿಸುತ್ತಾ ಸಾಗತೊಡಗಿತು. ವೇಳೆ ಸಿಂಗ್ಟಂ ಪ್ರದೇಶದ ಬರ್ದಾಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಕೊಚ್ಚಿ ಹೋದವು. ಹಲವಾರು ವಾಹನಗಳು ಕೆಸರಿನಲ್ಲಿ ಸಿಲುಕಿವೆ ಎಂದು ಸೇನೆ ತಿಳಿಸಿದೆ.

ರಾಜಧಾನಿ ಗ್ಯಾಂಗ್ಟಕ್‌ನಿಂದ 30 ಕಿ.ಮೀ. ದೂರದಲ್ಲಿರುವ ಉಕ್ಕಿನ ಸೇತುವೆ ಇಂದ್ರೇಣಿ ಬ್ರಿಡ್ಜ್ ಅನ್ನು ತೀಸ್ತಾ ನದಿನೀರು ಹೊತ್ತೂಯ್ದಿದೆ. ಲ್ಯಾಂಕೋ ಹೈಡೆಲ್‌ ಪವರ್‌ ಪ್ರಾಜೆಕ್ಟ್ ಸಮೀಪ ವಿರುವ ಸೇತುವೆ ಸಹಿತ ಒಟ್ಟು 8 ಸೇತುವೆಗಳೂ ಕೊಚ್ಚಿ ಹೋಗಿವೆ. ಸಿಂಗ್ಟಂ, ರಾಂಗ್‌ಪೋ ಸಹಿತ ಹಲವಾರು ಪಟ್ಟಣಗಳು ಜಲಾವೃತವಾಗಿವೆ. ಸಿಕ್ಕಿಂ ಜತೆಗೆ ದೇಶದ ಇತರ ಭಾಗಗಳನ್ನು ಸಂಪರ್ಕಿಸುವ ರಾ. ಹೆದ್ದಾರಿ-10ರ ಭಾಗವೂ ನೀರುಪಾಲಾಗಿದೆ.

ಮುಂದಿನ 2 ದಿನ ಭಾರೀ ಮಳೆ ಮುಂದುವರಿಯಲಿದ್ದು, ಗ್ಯಾಂಗ್ಟಕ್‌, ಗ್ಯಾಲ್ಶಿಂಗ್, ಪಕ್ಯಾಂಗ್‌ ಮತ್ತು ಸೊರೆಂಗ್‌ ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಮಂಗಾನ್‌ ಮತ್ತು ನಾಮಚಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಟೀಸ್ಟಾ ನದಿ ಪ್ರವಾಹದ ಕಾರಣ ಪಶ್ಚಿಮ ಬಂಗಾಲ ಮತ್ತು ಬಾಂಗ್ಲಾ ದೇಶಕ್ಕೂ ಎಚ್ಚರಿಕೆ ರವಾನಿಸಲಾಗಿದೆ. ಪ.ಬಂ.ದ ಜಲ್‌ಪಾಯಿಗುರಿ ಆಡ ಳಿತವು ತಗ್ಗುಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಆರಂಭಿಸಿದೆ. ಬುಧ ವಾರ 10 ಸಾವಿರ ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಸಿಕ್ಕಿಂ ಸಿಎಂ ಜತೆ ಮೋದಿ ಮಾತುಕತೆ
ಬುಧವಾರ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಗೋಲೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ. ಜತೆಗೆ, ಸಂತ್ರಸ್ತರ ಸುರಕ್ಷೆಗಾಗಿ ಪ್ರಾರ್ಥಿ ಸುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: Cricket World Cup 2023: ಸಚಿನ್‌ ತೆಂಡುಲ್ಕರ್‌ ಜಾಗತಿಕ ರಾಯಭಾರಿ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.