16 ವರ್ಷದ ಬಾಲಕಿ ಜತೆ 23 ವರ್ಷದ ಯುವಕ ವಿವಾಹ: ಮದುಮಗ, ಪೋಷಕರ ವಿರುದ್ಧ ಕೇಸ್
ಈ ಘಟನೆ ಕುರಿತು ಅಚ್ಯುತ ಅವರು ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ತಿಳಿಸಿದೆ.
Team Udayavani, Jun 4, 2020, 3:29 PM IST
Representative Image
ಹೈದರಾಬಾದ್:16ವರ್ಷದ ಬಾಲಕಿಯೊಬ್ಬಳು 23 ವರ್ಷದ ಯುವಕನನ್ನು ವಿವಾಹವಾದ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಈ ವಿವಾಹ ನೆರವೇರಿಸಿದ ಪುರೋಹಿತರು, ಬಾಲಕಿ ಹಾಗೂ ಯುವಕನ ಪೋಷಕರು, ಮದುಮಗನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕು ಆಯೋಗ ಬೇಡಿಕೆ ಇಟ್ಟಿದೆ.
ಮಕ್ಕಳ ಹಕ್ಕುಗಳ ಸಂಘಟನೆ(ಬಾಲಾಲಾ ಹಕ್ಕುಲಾ ಸಂಘಂ)ಯ ಅಚ್ಯುತ ರಾವ್ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಹೈದರಾಬಾದ್ ಹೊರವಲಯವಾದ ಮಲ್ಕಾಜ್ ಗಿರಿ ಮೆದ್ ಚಾಲ್ ಜಿಲ್ಲೆಯ ಗುಂಡಲಾಪೋಂಚಾಪಲ್ಲಿಯ ದೇವಸ್ಥಾನವೊಂದರಲ್ಲಿ ಜೂನ್ 1ರಂದು 1ಗಂಟೆಗೆ 23 ವರ್ಷದ ಗುತ್ತಿಗೆ ಕಾಮಗಾರಿಯ ದಿನಗೂಲಿ ನೌಕರ 16ವರ್ಷದ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಿರುವುದಾಗಿ ಆರೋಪಿಸಿದ್ದಾರೆ.
ಯುವಕನ ಪೋಷಕರು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಕೆಲವು ಹಿರಿಯರ ನೆರವಿನೊಂದಿಗೆ ದೇವಸ್ಥಾನಕ್ಕೆ ತೆರಳಿ ವಿವಾಹವಾಗಿದ್ದ. ಶಾಲಾ ಸರ್ಟಿಫಿಕೇಟ್ ಪ್ರಕಾರ ಬಾಲಕಿಯ ವಯಸ್ಸು 16ವರ್ಷ. ಈ ಘಟನೆ ಕುರಿತು ಅಚ್ಯುತ ಅವರು ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎಂದು ತಿಳಿಸಿದೆ.
ಮದುಮಗ ಹಾಗೂ ಕುಟುಂಬಸ್ಥರ ವಿರುದ್ಧ ಐಪಿಸಿ ಸೆಕ್ಷನ್ 376ರ ಪ್ರಕಾರ ಹಾಗೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅಚ್ಯುತ ಅವರು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ ದೇವಸ್ಥಾನದ ಪುರೋಹಿತರ ವಿರುದ್ಧವೂ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದ್ದಾರೆ. ಘಟನೆಯನ್ನು ಪೊಲೀಸರು ಖಚಿತಪಡಿಸಿದ್ದು, ಬಾಲಕಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದ್ದು, ದೇವಸ್ಥಾನದ ಪುರೋಹಿತರು, ಪೋಷಕರು, ಕೆಲವು ಹಿರಿಯರು ಹಾಗೂ ಮದುವೆ ವಿಚಾರದಲ್ಲಿ ಭಾಗಿಯಾಗಿದ್ದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಡಬ್ಲ್ಯುಒ ಸ್ವರೂಪಾ ರಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ