ಅಫ್ಘಾನ್ ನಿಂದ ಹಿಂಡನ್ ಏರ್ಬೇಸ್ಗೆ ಬಂದಿಳಿದ 107 ಭಾರತೀಯರು ಸೇರಿ 168 ಮಂದಿಯಿದ್ದ ವಿಮಾನ
Team Udayavani, Aug 22, 2021, 11:31 AM IST
ಹೊಸದಿಲ್ಲಿ: ಸಂಘರ್ಷಪೀಡಿತ ಅಫ್ಘಾನಿಸ್ಥಾನದ ಕಾಬೂಲ್ ನಿಂದ 107 ಭಾರತೀಯರು ಸೇರಿ 168 ಮಂದಿಯನ್ನು ಭಾರತೀಯ ವಾಯುಪಡೆಯ ವಿಮಾನದ ಮೂಲಕ ಕರೆತರಲಾಗಿದೆ.
ಭಾರತದ ಹಿಂಡನ್ ಏರ್ಬೇಸ್ಗೆ C-17 ವಾಯುಸೇನೆ ವಿಮಾನ ಬಂದಿಳಿದಿದೆ. ಆಫ್ಘನ್ನ ಹಿಂದೂಗಳು, ಸಿಖ್ಖರು ಸೇರಿ 168 ಜನ ಬಂದಿದ್ದಾರೆ. ಅದರಲ್ಲಿ 107 ಭಾರತೀಯರು ಇದ್ದಾರೆ.
ಇದನ್ನೂ ಓದಿ:“ತಾಲಿಬಾನ್ ಉಪಟಳ ಸಹಿಸಲಸಾಧ್ಯ” : ಕಾಬೂಲ್ ನಿಂದ ಅಮೆರಿಕಾ ತಲುಪಿತು ಮಹಿಳೆಯೋರ್ವಳ ಆಡಿಯೋ
ಆಫ್ಘನ್ ನ ಕಾಬೂಲ್ ನಲ್ಲಿ ಸಿಲುಕಿದ್ದ 87 ಭಾರತೀಯರ ರಕ್ಷಣೆ ಮಾಡಲಾಗಿರುವ ಬಗ್ಗೆಯೂ ತಿಳಿದು ಬಂದಿದೆ. 87 ಭಾರತೀಯರನ್ನು ರಕ್ಷಿಸಿ ತಜಕಿಸ್ತಾನದಿಂದ ಏರ್ಲಿಫ್ಟ್ ಮಾಡಲಾಗಿದೆ. ತಜಕಿಸ್ತಾನದಿಂದ ದೆಹಲಿಗೆ 87 ಭಾರತೀಯರ ಏರ್ಲಿಫ್ಟ್ ಮಾಡಲಾಗುತ್ತದೆ. ಭಾರತೀಯರ ಜತೆ ಇಬ್ಬರು ನೇಪಾಳಿಗರು ಕೂಡ ಸ್ಥಳಾಂತರ ಎಂದು ತಿಳಿದುಬಂದಿದೆ.
IAF C-17 aircraft has brought over 160 people including more than 100 Indians.
The spcl flight has taken off from #Afghanistan‘s #KabulAiport in the wee hours today. https://t.co/WqvZtti55m pic.twitter.com/hHqd1aFETP
— Abhishek Jha (@abhishekjha157) August 22, 2021
ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆ ಮಾಡುವುದಾಗಿ ಭಾರತೀಯ ವಿದೇಶಾಂಗ ವ್ಯವಹಾರಗಳ ಇಲಾಖೆ ಭರವಸೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಕೆಲವು ಚಿತ್ರಗಳನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ಮೂಲಕ ಸ್ಥಳಾಂತರಿಸುವ ಪ್ರಯತ್ನಗಳ ವಿವರಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಅವರು ಒಂದು ಸಣ್ಣ ವೀಡಿಯೋ ಕ್ಲಿಪ್ ಅನ್ನು ಸಹ ಪೋಸ್ಟ್ ಮಾಡಿದ್ದು, ಅದರಲ್ಲಿ ಸ್ಥಳಾಂತರಿಸಿದವರು “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗಿ ಸಂತಸಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ