ಕೇರಳದಲ್ಲಿ ಕುಂಭ ದ್ರೋಣ ಮಳೆ, ನೆರೆ, ಭೂಕುಸಿತ: 18 ಮಂದಿ ಬಲಿ
Team Udayavani, Aug 9, 2018, 12:03 PM IST
ತಿರುವನಂತಪುರ: ಇಂದು ನಸುಕಿನ ವೇಳೆ ಕೇರಳದ ವಿವಿಧ ಭಾಗಗಳಲ್ಲಿ ಸುರಿದಿರುವ ಜಡಿ ಮಳೆ ಮತ್ತು ಭೂಕುಸಿತ ದುರಂತಕ್ಕೆ ಕನಿಷ್ಠ 18 ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕೃತಿ ವಿಕೋಪ ನಿಯಂತ್ರಣ ಕೊಠಡಿಯ ಮಾಹಿತಿಯ ಪ್ರಕಾರ ಇಡುಕ್ಕಿಯಲ್ಲಿ 10 ಮಂದಿ, ಮಲಪ್ಪುರಂ ನಲ್ಲಿ ಐವರು, ಕಣ್ಣೂರಿನಲ್ಲಿ ಇಬ್ಬರು ಮತ್ತು ವಯನಾಡ್ ಜಿಲ್ಲೆಯಲ್ಲಿ ಓರ್ವರು ಭೂಕುಸಿತದಿಂದ ಮೃತಪಟ್ಟಿದ್ದಾರೆ.
ವಯನಾಡ್, ಪಾಲಕ್ಕಾಡ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ತಲಾ ಒಬ್ಬರು ನಾಪತ್ತೆಯಾಗಿದ್ದಾರೆ.
ಇಡುಕ್ಕಿಯ ಆದಿಮಲೆ ಪಟ್ಟಣದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟರು. ಸ್ಥಳೀಯರು ಮತ್ತು ಪೊಲೀಸರು ಜತೆಗೂಡಿ ಇಬ್ಬರನ್ನು ಜೀವ ಸಹಿತ ಅವಶೇಷಗಳಡಿಯಿಂದ ಹೊರತೆಗೆದರು.
ಇಂದು ಬೆಳಗ್ಗೆ ಇಡಮಲಯರ್ ಡ್ಯಾಮ್ ನಿಂದ ಸುಮಾರು 600 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಯಿತು. ಜಲಾಶಯದಲ್ಲಿನ ನೀರು ತನ್ನ ಪೂರ್ಣ 169 ಮೀಟರ್ ಸಾಮರ್ಥ್ಯವನ್ನು ಮೀರಿ 169.95 ಮೀಟರ್ ಗೆ ಏರಿದ ಕಾರಣ ನೀರನ್ನು ಹೊರಬಿಡಲೇಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಡುಕ್ಕಿ ಡ್ಯಾಮ್ ಇಂದು ಬೆಳಗ್ಗೆ 8 ಗಂಟೆಯ ಹೊತ್ತಿಗೆ 2,398 ಅಡಿ ಮಟ್ಟಕ್ಕೆ ತುಂಬಿಕೊಂಡಿತ್ತು. ಇದರ ಎಫ್ಆರ್ಎಲ್ ಮಟ್ಟ 2,403 ಅಡಿ. ಅಂತೆಯೇ ಆಡಳಿತೆಯು ಈಗ ಈ ಬಗ್ಗೆ ಕಟ್ಟೆಚ್ಚರ ಘೋಷಿಸಿದೆ.
ಭಾರೀ ಮಳೆ ಸುರಿಯುತ್ತಿರುವ ಪರಿಣಾಮವಾಗಿ ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ನೆರೆ ಉಂಟಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನ ತಂಡ ಕೋಯಿಕ್ಕೋಡ್ಗೆ ಧಾವಿಸಿದೆ.
ಇಡುಕ್ಕಿ, ಕೊಲ್ಲಂ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಜಡಿ ಮಳೆ ಆಗುತ್ತಿರುವುದರಿಂದ ಶಿಕ್ಷಣಾಲಯಗಳಿಗೆ ರಜೆ ಸಾರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ