#Wesaluteyou: ರಕ್ತದಾನ ಮಾಡಿ ಯುವತಿಯ ಜೀವ ಉಳಿಸಿದ CRPF ಯೋಧರು
Team Udayavani, Nov 25, 2020, 8:02 PM IST
ಶ್ರೀನಗರ: 19 ವರ್ಷದ ಯುವತಿಗೆ ಇಬ್ಬರು ಸಿಆರ್ಪಿಎಫ್ ಯೋಧರು ರಕ್ತದಾನ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.
ಶ್ರೀನಗರದ ಶೇರ್-ಇ-ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಸ್ಕೆಐಎಂಎಸ್) ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿಗೆ ಒಳಗಾಗಿದ್ದ 19 ವರ್ಷದ ಯುವತಿಯೋರ್ವಳಿಗೆ ಸಿಆರ್ಪಿಎಫ್ ನ ಇಬ್ಬರು ಯೋಧರು ರಕ್ತದಾನ ಮಾಡಿದ್ದಾರೆ. ಆ ಮೂಲಕ ಗಡಿಯಲ್ಲಿ ನಿಂತು ದೇಶವನ್ನು ರಕ್ಷಣೆ ಮಾಡುವುದು ಮಾತ್ರವಲ್ಲದೆ ದೇಶದ ಒಳಗೂ ಹಲವರ ಜೀವ ಉಳಿಸುವ ಕೈಂಕರ್ಯದಲ್ಲಿ ತೊಡಗಿದ್ದಾರೆ.
ಬುಡ್ಗಾಂ ಜಿಲ್ಲೆಯ ಸಯೀದಾ ಎಂಬ ಯುವತಿ ಮೂತ್ರಪಿಂಡ ಕಸಿ ಚಿಕಿತ್ಸೆಗಾಗಿ ಶ್ರೀನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ರಕ್ತದ ಆವಶ್ಯಕತೆ ಇತ್ತು. ಇದನ್ನು ತಿಳಿದ ಸಿಆರ್ಪಿಎಫ್ 73ನೇ ಬೆಟಾಲಿಯನ್ನ ಸಹಾಯಕ ಕಮಾಂಡೆಂಟ್ ಜಾವೇದ್ ಅಲಿ ಮತ್ತು ಕಾನ್ಸ್ಟೆಬಲ್ ರಂಜನ್ ಕುಮಾರ್ ರಕ್ತದಾನ ಮಾಡಿ ಯುವತಿಯ ಜೀವ ಉಳಿಸಿದ್ದಾರೆ.
ಇದನ್ನೂ ಓದಿ: 26/11 ದಾಳಿ ನಾಳೆಗೆ 12 ವರ್ಷ ಪೂರ್ಣ: ಗಣ್ಯರಿಂದ ಹುತಾತ್ಮರಿಗೆ ಗೌರವ ಸಮರ್ಪಣೆ
Asst Comdt Javed Ali & Constable Ranjan Kumar of 73 bn @crpf_srinagar @JKZONECRPF @crpfindia donated blood to 19 yr old Sayeeda from Budgam, undergoing Kidney transplant at SKIMS.
Wishing her good health & a speedy recovery #HelpUsToHelpYou#DonateBloodSaveLife pic.twitter.com/HHb3VWYfhC
— CRPF Madadgaar (@CRPFmadadgaar) November 24, 2020
ಯೋಧರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಹಲವರು ಯೋಧರ ಈ ಕಾರ್ಯಕ್ಕೆ ಸೆಲ್ಯೂಟ್ ಎಂದಿದ್ದು, #HelpUsToHelpYou #DonateBloodSaveLife ಎಂಬ ಹ್ಯಾಶ್ಟ್ಯಾಗ್ ಟ್ರೆಂಡ್ ಸೃಷ್ಟಿಸಿದೆ.
ಇದನ್ನೂ ಓದಿ: ಪಾಕ್ To ಕಾಂಬೋಡಿಯ: ಏರ್ ಲಿಫ್ಟ್ ಮೂಲಕ ‘ಕಾವನ್’ ಸ್ಥಳಾಂತರ: ಯಾರಿವನು ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ