1970ರ ಪ್ರಕರಣ: ಇರಾನ್ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
Team Udayavani, Mar 19, 2023, 7:25 AM IST
ಮುಂಬೈ: 1970ರ ಪ್ರಕರಣವೊಂದರ ತೀರ್ಪನ್ನು ಪ್ರಶ್ನಿಸಿ ಇರಾನ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ವಜಾ ಮಾಡಿದೆ.
ರೈಲು ಬಂಡಿ ಮಾರಾಟಕ್ಕೆ ಸಂಬಂಧಿಸಿದ ವಿವಾದದಲ್ಲಿ ಭಾರತೀಯ ಕಂಪನಿಗೆ 35 ಲಕ್ಷ ಡಾಲರ್ ಪಾವತಿಸುವಂತೆ ಇರಾನ್ ಸರ್ಕಾರಕ್ಕೆ 2008ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಇರಾನ್ ಸರ್ಕಾರ ಮೇಲ್ಮನವಿ ಸಲ್ಲಿತ್ತು.
ಈ ಅರ್ಜಿಯನ್ನು ವಜಾ ಮಾಡಿರುವ ಉಚ್ಚ ನ್ಯಾಯಾಲಯ, ನಾಲ್ಕು ವಾರಗಳೊಳಗಾಗಿ ಭಾರತದ ಕೆಟಿ ಸ್ಟೀಲ್ಸ್ ಕಂಪನಿಗೆ ದಂಡದ ಮೊತ್ತವನ್ನು ಪಾವತಿಸಬೇಕು ಎಂದು ಸೂಚಿಸಿದೆ. ಅಲ್ಲದೇ, ಹೆಚ್ಚುವರಿಯಾಗಿ 10 ಲಕ್ಷ ರೂ. ದಂಡವನ್ನೂ ವಿಧಿಸಿದೆ.
1970ರ ಮಾ.16ರಂದು ಇರಾನ್ಗೆ ರೈಲು ಬಂಡಿಗಳನ್ನು ಪೂರೈಕೆ ಮಾಡುವ ಒಪ್ಪಂದಕ್ಕೆ ಕೆಟಿ ಸ್ಟೀಲ್ಸ್ ಸಹಿ ಹಾಕಿತ್ತು. 1972ರಲ್ಲಿ ಅಂತಾರಾಷ್ಟ್ರೀಯ ತೈಲ ದರದಲ್ಲಿ ಏರಿಕೆಯಾದ ಕಾರಣ, ಸರಕು ಸಾಗಣೆ ವೆಚ್ಚವೂ ಹೆಚ್ಚಳವಾಯಿತು.
306 ರೈಲು ಬಂಡಿಗಳ ಸಾಗಣೆ ವೆಚ್ಚವನ್ನು ಇರಾನ್ ಸರ್ಕಾರ ಪಾವತಿಸುತ್ತಿಲ್ಲ ಎಂದು ಕೆಟಿ ಸ್ಟೀಲ್ಸ್ ದೂರಿತ್ತು. 1996ರಲ್ಲಿ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
2008ರಲ್ಲಿ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್, 35 ಲಕ್ಷ ಡಾಲರ್ ಮೊತ್ತವನ್ನು ಕೆಟಿ ಸ್ಟೀಲ್ಸ್ಗೆ ಪಾವತಿಸುವಂತೆ ಇರಾನ್ ಸರ್ಕಾರಕ್ಕೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ