1984ರ ಸಿಕ್ಖ ವಿರೋಧಿ ದೊಂಬಿ: ಯಶ್ಪಾಲ್ಗೆ ನೇಣು,ನರೇಶ್ಗೆ ಜೀವಾವಧಿ
Team Udayavani, Nov 20, 2018, 5:19 PM IST
ಹೊಸದಿಲ್ಲಿ : 1984ರ ಸಿಕ್ಖ ದೊಂಬಿ ಪ್ರಕರಣದಲ್ಲಿ ದಿಲ್ಲಿ ಕೋರ್ಟ್ ಇಂದು ಯಶ್ಪಾಲ್ ಸಿಂಗ್ ಗೆ ಮರಣ ದಂಡನೆಯನ್ನು ಮತ್ತು ನರೇಶ್ ಶೇರಾವತ್ ಗೆ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
ಈ ಇಬ್ಬರೂ ಆರೋಪಿಗಳು ಸಿಕ್ಖ ಸಮುದಾಯದ ಇಬ್ಬರು ಸದಸ್ಯರನ್ನು ಕೊಂದ ಅಪರಾಧ ಎಸಗಿದವರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.
ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ, ಈ ಇಬ್ಬರೂ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವಂತೆ ನ್ಯಾಯಾಲಯವನ್ನು ಆಗ್ರಹಿಸಿತ್ತು. ಈ ಅಪರಾಧಿಗಳು ನಿರ್ದಿಷ್ಟ ಸಮುದಾಯವೊಂದರ ವಿರುದ್ಧ ಜನಾಂಗೀಯ ಹತ್ಯೆ ನಡೆಸಿದ್ದು ಇದು ಅಪರೂಪದಲ್ಲೇ ಅಪರೂಪದ ಅಪರಾಧವಾಗಿರುವುದರಿಂದ ಇವರಿಗೆ ಮರಣ ದಂಡನೆ ವಿಧಿಸುವಂತೆ ಎಸ್ಐಟಿ ಆಗ್ರಹಿಸಿತ್ತು.
ಈ ಇಬ್ಬರು ಅಪರಾಧಿಗಳು ದಕ್ಷಿಣ ದಿಲ್ಲಿಯ ಮಹಿಪಾಲಪುರ ದಲ್ಲಿ ದೊಂಬಿಯ ವೇಳೆ ಹರದೇವ್ ಸಿಂಗ್ ಮತ್ತು ಅವತಾರ್ ಸಿಂಗ್ ಎಂಬವರನ್ನು ಕೊಂದಿದ್ದರು ಎಂದು ಎಸ್ಐಟಿ ಹೇಳಿದೆ.
1984ರ ಸಿಕ್ಖ ವಿರೋಧಿ ದಂಗೆಯಲ್ಲಿ ಸುಮಾರು 3,000 ಮಂದಿಯ ಹತ್ಯೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ