1984ರ ಸಿಕ್ಖ್ ವಿರೋಧಿ ದೊಂಬಿ: ತನಿಖೆ ಮುಗಿಸಲು ಮತ್ತೆ 2 ತಿಂಗಳ ಕಾಲಾವಕಾಶ
Team Udayavani, Mar 29, 2019, 12:33 PM IST
ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ದೊಂಬಿಯ 186 ಕೇಸುಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ವಿಶೇಷ ತನಿಖಾ ತಂಡಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶ ನೀಡಿದೆ.
1984ರ ಸಿಕ್ಖ್ ವಿರೋಧಿ ದೊಂಬಿಯ 186 ಕೇಸುಗಳ ತನಿಖಾ ಕಾರ್ಯದ ಶೇ.50ರಷ್ಟನ್ನು ಪೂರ್ಣಗೊಳಿಸಲಾಗಿದೆ. ಉಳಿದರ್ಧವನ್ನು ಪೂರೈಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಬೇಕಿದೆ ಎಂದು ಎಸ್ಐಟಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಿತ್ತು.
ಜಸ್ಟಿಸ್ ಎಸ್ ಎ ಬೋಬಡೆ ಮತ್ತು ಜಸ್ಟಿಸ್ ಎಸ್ ಅಬ್ದುಲ್ ನಜೀರ್ ಅವರನ್ನು ಒಳಗೊಂಡ ಪೀಠವು ಎಸ್ಐಟಿ ಕೋರಿಕೆಯನ್ನು ಪುರಸ್ಕರಿಸಿ ಎರಡು ತಿಂಗಳ ಕಾಲಾವಕಾಶ ಮಂಜೂರು ಮಾಡಿತು.
ದೊಂಬಿಯಲ್ಲಿ ಹೆಸರಿಸಲಾಗಿರುವ 62 ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಯಬೇಕೆಂದು ಕೋರಿ ದಿಲ್ಲಿಯ ಸಿಕ್ಖ್ ಗುರುದ್ವಾರ ವ್ಯವಸ್ಥಾಪನ ಸಮಿತಿಯ ಓರ್ವ ಸದಸ್ಯರಾಗಿರುವ ಎಸ್ ಗುರುಲಾಡ್ ಸಿಂಗ್ ಕಹಲೋನ್ ಅವರು ಸಲ್ಲಿಸಿದ್ದ ಮನವಿಯನ್ನು ಇದೇ ಸಂದರ್ಭದಲ್ಲಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಕಕ್ಷಿದಾರರಿಗೆ ನೊಟೀಸ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ