ರಾಜವಂಶಸ್ಥ ಹತ್ಯೆ: 35 ವರ್ಷಗಳ ಬಳಿಕ 11 ನಿವೃತ್ತ ಪೊಲೀಸರಿಗೆ ಜೀವಾವಧಿ ಶಿಕ್ಷೆ

35 ವರ್ಷಗಳ‌ ಹಿಂದೆ ನಡೆದಿದ್ದ ಕೇಸ್‌ ; ಮಥುರಾ ಕೋರ್ಟ್‌ನಲ್ಲಿ 1,700 ಬಾರಿ ನಡೆದಿದ್ದ ವಿಚಾರಣೆ

Team Udayavani, Jul 23, 2020, 6:50 AM IST

ರಾಜವಂಶಸ್ಥ ಹತ್ಯೆ: 35 ವರ್ಷಗಳ ಬಳಿಕ 11 ನಿವೃತ್ತ ಪೊಲೀಸರಿಗೆ ಜೀವಾವಧಿ ಶಿಕ್ಷೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಥುರಾ: ರಾಜಸ್ಥಾನದ ಹಿಂದಿನ ಭರತ್ಪುರ ಸಂಸ್ಥಾನದ ರಾಜವಂಶಸ್ಥ ರಾಜಮಾನ್‌ ಸಿಂಗ್‌ ಹತ್ಯೆ ಪ್ರಕರಣದಲ್ಲಿ 11 ನಿವೃತ್ತ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಉತ್ತರ ಪ್ರದೇಶದ ಮಥುರಾ ಜಿಲ್ಲಾ ನ್ಯಾಯಾಲಯ ಮಂಗಳವಾರ ಈ ಪ್ರಕರಣ ಸಂಬಂಧ ತೀರ್ಪು ನೀಡಿ, ರಾಜಸ್ಥಾನದ ದೀಗ್‌ ಪೊಲೀಸ್‌ ಠಾಣೆಯ ನಿವೃತ್ತ ಡಿವೈಎಸ್ಪಿ ಕಾನ್‌ ಸಿಂಗ್‌, ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ ವಿರೇಂದ್ರ ಸಿಂಗ್‌ ಸೇರಿದಂತೆ 11 ಪೊಲೀಸರನ್ನು ದೋಷಿಗಳು ಎಂದು ಪ್ರಕಟಿಸಿತ್ತು. ಬುಧವಾರ ಶಿಕ್ಷೆ ಪ್ರಮಾಣವನ್ನು ನಿಗದಿಪಡಿಸಿದೆ.

1985ರ ಫೆಬ್ರವರಿಯಲ್ಲಿ ರಾಜಸ್ಥಾನದ ಭರತ್ಪುರ ಸಂಸ್ಥಾನದ ರಾಜ ವಂಶಸ್ಥರಾಗಿದ್ದ ರಾಜಮಾನ್‌ ಸಿಂಗ್‌ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇವರ ವಿರುದ್ಧ ಕಣಕ್ಕಿಳಿದಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಬ್ರಜೇಂದ್ರ ಸಿಂಗ್‌ ಪರ ಕಾಂಗ್ರೆಸ್‌ ಮುಖ್ಯಮಂತ್ರಿಯಾಗಿದ್ದ ಶಿವಚರಣ್‌ ಮಥುರ್‌ ರ್ಯಾಲಿ ಆಯೋಜಿಸಿದ್ದರು.

ಅಂದು ಮುಖ್ಯಮಂತ್ರಿಗಳ ಹೆಲಿಕಾಪ್ಟರ್‌ ಮೇಲೆ ರಾಜಮಾನ್‌ ಸಿಂಗ್‌ ಜೀಪು ನುಗ್ಗಿಸಿದ್ದರು. ಇದರಿಂದ ಹೆಲಿಕಾಪ್ಟರ್‌ಗೆ ಹಾನಿಯಾಗಿತ್ತು. ಮಾತ್ರವಲ್ಲದೆ ಪೊಲೀಸರು ಎನ್‌ಕೌಂಟರ್‌ ನಡೆಸಿ, ರಾಜಮಾನ್‌ ಸಿಂಗ್‌ ಹಾಗೂ ಅವರ ಇಬ್ಬರು ಬೆಂಬಲಿಗರನ್ನು ಹತ್ಯೆಗೈದಿದ್ದರು.

ಘಟನೆ ನಡೆದು 2 ದಿನಗಳ ಬಳಿಕ ಶಿವಚರಣ್‌ ಮಥುರ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹತ್ಯೆ ಪ್ರಕರಣವನ್ನು ಅಂದು ಕೇಂದ್ರ ಸರಕಾರ ಸಿಬಿಐಗೆ ವಹಿಸಿತ್ತು. ರಾಜಸ್ಥಾನದ ಜೋಧ್‌ಪುರ ನ್ಯಾಯಾಲಯವು ವಿಚಾರಣೆ ನಡೆಸುತ್ತಿದ್ದ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಉತ್ತರ ಪ್ರದೇಶದ ಮಥುರಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. 35 ವರ್ಷಗಳ ಬಳಿಕ ತೀರ್ಪು ನೀಡಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.