1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯೂಸೂಫ್ ಮೆಮನ್ ಜೈಲಿನಲ್ಲೇ ಸಾವು
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Jun 26, 2020, 6:12 PM IST
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿಗಳಲ್ಲಿ ಒಬ್ಬನಾದ ಯೂಸೂಫ್ ಮೆಮನ್ ಶುಕ್ರವಾರ ಮಹಾರಾಷ್ಟ್ರದ ನಾಸಿಕ್ ಜೈಲಿನಲ್ಲಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಈತ ಮುಂಬೈ ಸ್ಫೋಟದ ರೂವಾರಿಗಳಲ್ಲಿ ಒಬ್ಬನಾದ ಟೈಗರ್ ಮೆಮನ್ ಸಹೋದರ.
ಈತನ ಸಾವು ಹೇಗೆ ಸಂಭವಿಸಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪ್ರಾಥಮಿಕ ವರದಿ ಪ್ರಕಾರ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಯೂಸೂಫ್ ಸಾವಿಗೀಡಾಗಿರುವುದಾಗಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೂಸೂಫ್ ಮೆಮನ್ ಸಾವನ್ನು ನಾಸಿಕ್ ಪೊಲೀಸ್ ಕಮಿಷನರ್ ವಿಶ್ವಾಸ್ ನಂಗ್ರೆ ಪಾಟೀಲ್ ಖಚಿತಪಡಿಸಿದ್ದಾರೆ. ಯೂಸೂಫ್ ಹಿರಿಯ ಸಹೋದರ ಯಾಕೂಬ್ ಮೆಮನ್ ನನ್ನು 2015ರಲ್ಲಿ ನಾಗ್ಪುರ್ ಜೈಲಿನಲ್ಲಿ ನೇಣಿಗೆ ಏರಿಸಲಾಗಿತ್ತು.
ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಟೈಗರ್ ಮೆಮನ್ ಈ ಸರಣಿ ಬಾಂಬ್ ಸ್ಫೋಟದ ರೂವಾರಿಗಳಾಗಿದ್ದಾರೆ. ಯೂಸೂಫ್ ಮುಂಬೈನಲ್ಲಿನ ಆತನ ಅಲ್ ಹುಸೈನಿ ಗ್ಯಾರೇಜ್ ಹಾಗೂ ಫ್ಲ್ಯಾಟ್ ಅನ್ನು ಉಗ್ರರ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಎಂದು ವರದಿ ತಿಳಿಸಿದೆ.
ಭಯೋತ್ಪಾದಕ ನಿಗ್ರಹ ವಿಶೇಷ ಟಾಡಾ ಕೋರ್ಟ್ ಯೂಸೂಫ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. 1993ರ ಮಾರ್ಚ್ 12ರಂದು ಸಂಭವಿಸಿದ್ದ ಈ ಸರಣಿ ಬಾಂಬ್ ಸ್ಫೋಟದಲ್ಲಿ 250 ಮಂದಿ ಸಾವನ್ನಪ್ಪಿದ್ದರು. ಹಲವಾರು ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?