ಆಗಸ್ಟ್ ಒಂದೇ ತಿಂಗಳಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
Team Udayavani, Oct 2, 2022, 9:37 AM IST
ನವದೆಹಲಿ : ಆಗಸ್ಟ್ ಒಂದು ತಿಂಗಳಲ್ಲಿ 2.3 ಮಿಲಿಯನ್ ಭಾರತೀಯ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿದ್ದು ಅದರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ವಾಟ್ಸಾಪ್ ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ.
ಇದು ಹಿಂದಿನ ತಿಂಗಳಿನಲ್ಲಿ ಮಾಡಲಾದ ನಿಷೇಧಕ್ಕಿಂತ ಕಡಿಮೆಯಾಗಿದೆ ಎಂದು ಹೇಳಿಕೊಂಡಿದೆ. ಅಂದಹಾಗೆ ಜುಲೈನಲ್ಲಿ 23.87 ಲಕ್ಷ ಭಾರತೀಯ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿತ್ತು. 2022 ಆಗಸ್ಟ್ 1 ರಿಂದ ಆಗಸ್ಟ್ 31ರ ನಡುವೆ 23,28,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ.
ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಗಳ ಪ್ರಕಾರ ಕಾನೂನು ಉಲ್ಲಂಘನೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಳೆದ ಜೂನ್ನಲ್ಲಿ 2.2 ಮಿಲಿಯನ್ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಮೊದಲು, ಮೇನಲ್ಲಿ 1.9 ಮಿಲಿಯನ್ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿದೆ, ಏಪ್ರಿಲ್ನಲ್ಲಿ 1.6 ಮಿಲಿಯನ್ ಮತ್ತು ಮಾರ್ಚ್ನಲ್ಲಿ 1.8 ಮಿಲಿಯನ್ ಖಾತೆಗಳನ್ನು ನಿಷೇದಿಸಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಿದೆ.
ವಾಟ್ಸಾಪ್ ವಕ್ತಾರರ ಹೇಳಿಕೆಯಂತೆ “ವಾಟ್ಸ್ಆ್ಯಪ್ ಬಳಕೆದಾರರಿಂದ -ಸುರಕ್ಷತಾ ವರದಿಯನ್ನು ಸ್ವೀಕರಿಸಿದೆ. ಜೊತೆಗೆ ದೂರುಗಳ ವಿವರಗಳನ್ನು ಪಡೆದಿದ್ದು, ಅದಕ್ಕೆ ಅನುಗುಣವಾದ ಕ್ರಮವನ್ನು ತೆಗೆದುಕೊಂಡಿದೆ, ಜೊತೆಗೆ ಪ್ಲಾಟ್ಫಾರ್ಮ್ ದುರುಪಯೋಗವನ್ನು ತಡೆಗಟ್ಟಲು ಕ್ರಮ ಕೈಗೊಂಡಿದೆ. ಖಾತೆಗಳಲ್ಲಿ ಅನಗತ್ಯ ಸಂದೇಶಗಳನ್ನು ಕಳುಹಿಸುವುದನ್ನು ತಡೆಯುವುದು ಅಥವಾ ಅಸಹಜವಾದ ಸಂದೇಶಗಳನ್ನು ಕಳುಹಿಸುವ ಖಾತೆಗಳನ್ನು ಗುರುತಿಸಿ ಸುಧಾರಿತ ಕ್ರಮವನ್ನು ವಾಟ್ಸ್ಆ್ಯಪ್ ಕೈಗೊಂಡಿದೆ ಎಂದಿದೆ.
ಇದನ್ನೂ ಓದಿ : ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಮೋದಿ, ಸೋನಿಯಾ, ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?