ಇಬ್ಬರು ವಿದ್ಯಾರ್ಥಿಗಳ ಖಾತೆಗೆ ಬಂತು 900 ಕೋಟಿ ರೂ.|ಎಟಿಎಂಗಳಿಗೆ ಮುಗಿ ಬಿದ್ದ ಹಳ್ಳಿಗರು
Team Udayavani, Sep 16, 2021, 3:31 PM IST
ಪಾಟ್ನಾ: ಬಿಹಾರಿನ ಕತಿಹಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಚಮತ್ಕಾರ ನಡೆದಿದೆ. ಇಬ್ಬರು ವಿದ್ಯಾರ್ಥಿಗಳ ಬ್ಯಾಂಕ್ ಖಾತಗೆ ಕೋಟ್ಯಂತರ ರೂ. ಹಣ ಜಮಾ ಆಗುವ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದೆ.
6 ನೇ ತರಗತಿಯ ಅನಿಶ್ ಹಾಗೂ ಗುರು ಚರಣ್ ವಿಶ್ವಾಸ ಹೆಸರಿನ ವಿದ್ಯಾರ್ಥಿಗಳು ಗ್ರಾಮೀಣ ಬ್ಯಾಂಕ್ನಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅನಿಶ್ ಖಾತೆಗೆ 6.2 ಕೋಟಿ ಹಾಗೂ ವಿಶ್ವಾಸನಿಗೆ 900 ಕೋಟಿ ರೂ. ಹಣ ಜಮಾ ಆಗಿದೆ. ಮರು ದಿನ ಪಾಲಕರ ಜೊತೆ ಎಟಿಎಂಗೆ ತೆರಳಿ ಬ್ಯಾಲೆನ್ಸ್ ಚೆಕ್ ಮಾಡಿದಾಗ ಕೋಟ್ಯಂತರ ರೂ.ಇರುವುದನ್ನು ಕಂಡು ಒಂದು ಕ್ಷಣ ದಿಕ್ಕು ತೋಚದಂತಾಗಿದೆ. ಈ ವಿಷಯ ಕಾಡ್ಗಿಚ್ಚಿನಂತೆ ಹರಡಿದ್ದು, ಹಳ್ಳಿಗರೆಲ್ಲರೂ ಎಟಿಎಂ ಕೇಂದ್ರಗಳಿಗೆ ತೆರಳಿ ಬ್ಯಾಲೆನ್ಸ್ ಚೆಕ್ ಮಾಡಿದ್ದಾರೆ. ಆದರೆ, ಕೇವಲ ಇಬ್ಬರು ವಿದ್ಯಾರ್ಥಿಗಳ ಖಾತೆಗೆ ಹಣ ಬಂದಿದೆ ಕಂಡು ನಿರಾಸೆಗೊಂಡಿದ್ದಾರೆ.
ಇನ್ನು ಘಟನೆ ಕುರಿತು ಮಾತನಾಡಿರುವ ಕತಿಹಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಉದಯನ್ ಮಿಶ್ರಾ, ವಿದ್ಯಾರ್ಥಿಗಳ ಖಾತೆಗೆ ಕೋಟ್ಯಂತರ ರೂ. ಜಮಾ ಆಗಿರುವ ಸುದ್ದಿ ನಿನ್ನೆ ಸಂಜೆ ನನ್ನ ಗಮನಕ್ಕೆ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಬ್ಯಾಂಕ್ ಮ್ಯಾನೇಜರ್ ಅವರಿಗೆ ತಿಳಿಸಿದ್ದೇನೆ ಎಂದಿದ್ದಾರೆ.
ಇನ್ನ ಕಳೆದ ಕೆಲ ತಿಂಗಳುಗಳ ಹಿಂದೆ ಈ ರೀತಿಯ ಪ್ರಕರಣವೊಂದು ಬಿಹಾರ್ ನಲ್ಲಿ ನಡೆದಿತ್ತು. ವ್ಯಕ್ತಿಯೊಬ್ಬನ ಖಾತೆಗೆ ಅಚಾತುರ್ಯದಿಂದ 5 ಲಕ್ಷ ರೂ. ಜಮಾ ಆಗಿತ್ತು. ಅದು ಸರ್ಕಾರದಿಂದ ನನ್ನ ಅಕೌಂಟ್ಗೆ ಬಂದಿರಬಹುದು. ಹಾಗಾಗಿ ಅದನ್ನು ಹಿಂದಿರುಗಿಸುವುದಿಲ್ಲ ಎಂದು ಆತ ವಾದಿಸಿದ್ದ. ಪರಿಣಾಮ ಆತನನ್ನು ಅದನ್ನು ಹಿಂದಿರುಗಿಸದಿದ್ದಕ್ಕೆ ಆತನನ್ನು ಜೈಲಿಗೆ ಅಟ್ಟಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ