21kg ಗಾಂಜಾ ಸ್ವಾಹಾ ಮಾಡಿದ ಇಲಿಗಳು!; ಇಬ್ಬರು ಆರೋಪಿಗಳು ಖುಲಾಸೆ
ಸಾಕ್ಷ್ಯವನ್ನು ಇಲಿಗಳು ನಾಶ ಮಾಡಿವೆ ಎಂದ ಪೊಲೀಸರು...!
Team Udayavani, Jul 5, 2023, 2:39 PM IST
ಚೆನ್ನೈ: 22 ಕಿಲೋಗ್ರಾಂಗಳಷ್ಟು ಗಾಂಜಾ ಹೊಂದಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ನ್ಯಾಯಾಲಯ ಖುಲಾಸೆಗೊಳಿಸಿದೆ. ಇದಕ್ಕೆ ಮುಖ್ಯ ಕಾರಣವಾಗಿದ್ದು ಇಲಿಗಳು ಸಾಕ್ಷ್ಯವನ್ನು ತಿಂದುಹಾಕಿವೆ ಎಂದು ಪೊಲೀಸರು ತಿಳಿಸಿದ್ದು…!, ಹೌದು 2020 ರಲ್ಲಿ ಮರೀನಾ ಪೊಲೀಸರು ಆರೋಪಿಗಳಾದ ರಾಜಗೋಪಾಲ್ ಮತ್ತು ನಾಗೇಶ್ವರ ರಾವ್ ರನ್ನು ಚೆನ್ನೈನಲ್ಲಿ ಬಂಧಿಸಿದ್ದರು.ಅವರ ವಿರುದ್ಧ ತನಿಖೆ ಆರಂಭಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಪ್ರಕರಣವನ್ನು ವಿಶೇಷ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಅಲ್ಲಿ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡ 50 ಗ್ರಾಂ ಗಾಂಜಾವನ್ನು ಸಲ್ಲಿಸಿದ್ದಾರೆ, ಮಾತ್ರವಲ್ಲದೆ 50 ಗ್ರಾಂ ಗಾಂಜಾವನ್ನುವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನುಳಿದ 21.9 ಕಿಲೋಗ್ರಾಂಗಳಷ್ಟು ಗಾಂಜಾ ಎಲ್ಲಿದೆ ಎಂದು ನ್ಯಾಯಾಲಯ ಕೇಳಿದಾಗ, ಅದನ್ನು ಇಲಿಗಳು ತಿಂದಿವೆ ಎಂದು ಪೊಲೀಸರು ಹೇಳಿದ್ದಾರೆ..!!. ಚಾರ್ಜ್ ಶೀಟ್ನಲ್ಲಿ ನಮೂದಿಸಲಾದ ಗಾಂಜಾವನ್ನು ಪೊಲೀಸರು ಸಲ್ಲಿಸಲು ಸಾಧ್ಯವಾಗದ ಕಾರಣ, ರಾಜಗೋಪಾಲ್ ಮತ್ತು ನಾಗೇಶ್ವರ ರಾವ್ ರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ