ಭಾರತದಲ್ಲಿ 83 ಮಂದಿಗೆ ಕೊರೊನಾ ದೃಢ; ರಾಜ್ಯವಾರು ಅಂಕಿಅಂಶ ಪ್ರಕಟಿಸಿದ ಕೇಂದ್ರ

ಕೊರೊನಾ ಸೋಂಕು 66 ಮಂದಿ ಭಾರತೀಯರಿಗೆ, 17 ಜನ ವಿದೇಶಿಯರಲ್ಲಿ ಪತ್ತೆಯಾಗಿದೆ.

Team Udayavani, Mar 14, 2020, 6:27 PM IST

ಭಾರತದಲ್ಲಿ 83 ಮಂದಿಗೆ ಕೊರೊನಾ ದೃಢ; ರಾಜ್ಯವಾರು ಅಂಕಿಅಂಶ ಪ್ರಕಟಿಸಿದ ಕೇಂದ್ರ

Representative Image

ನವದೆಹಲಿ: ಇಡೀ ಜಗತ್ತನ್ನು ತನ್ನ ಅಂಕೆಗೆ ತೆಗೆದುಕೊಳ್ಳಲು ಹೊರಟಿರುವ ಕೊರೊನಾ ವೈರಸ್ ಹಾವಳಿ ಈಗ ದೇಶದಲ್ಲಿಯೂ ಆತಂಕದ ವಾತಾವರಣ ಸೃಷ್ಟಿಸಿದ್ದು, ಇದೀಗ ಕೋವಿಡ್ -19 ಪ್ರಕರಣಗಳ ಬಗ್ಗೆ ಆರೋಗ್ಯ ಸಚಿವಾಲಯ ಶನಿವಾರ ಅಂಕಿಅಂಶವನ್ನು ಬಿಡುಗಡೆ ಮಾಡಿದೆ.

ದೇಶಾದ್ಯಂತ ಒಟ್ಟು 83 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಇದರೊಂದಿಗೆ ಭಾರತದಲ್ಲಿ ಕೊರೊನಾ ವೈರಸ್ ಗೆ ಇಬ್ಬರು ಸಾವನ್ನಪ್ಪಿದ್ದು, 83 ಜನರಿಗೆ ಕೊರೊನಾ ಸೋಂಕು ಇದ್ದಿರುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ.

ಸಚಿವಾಲಯದ ಮಾಹಿತಿ ಪ್ರಕಾರ ಕೊರೊನಾ ಸೋಂಕು 66 ಮಂದಿ ಭಾರತೀಯರಿಗೆ, 17 ಜನ ವಿದೇಶಿಯರಲ್ಲಿ ಪತ್ತೆಯಾಗಿದೆ. ದಿಲ್ಲಿಯಲ್ಲಿ ಒಬ್ಬ ಮಹಿಳೆ ಹಾಗೂ ಕಲಬುರಗಿಯಲ್ಲಿ 76 ವರ್ಷದ ಅಜ್ಜ ಸೇರಿದಂತೆ ದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿ ವಿವರಿಸಿದೆ.

ದಿಲ್ಲಿ:

ದೇಶದ ರಾಜಧಾನಿ ದಿಲ್ಲಿಯಲ್ಲಿ ಏಳು ಪ್ರಕರಣ ಪತ್ತೆಯಾಗಿದ್ದು, ಎಲ್ಲರು ಭಾರತೀಯ ಪ್ರಜೆಗಳು. ಮಾರ್ಚ್ 13ರಂದು 68 ವರ್ಷದ ಮಹಿಳೆಯೊಬ್ಬರು ದಿಲ್ಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದರು.

ದಿಲ್ಲಿಯಲ್ಲಿ ಎಲ್ಲಾ ಶಾಲೆಗಳು, ಸಿನಿಮಾ ಮಂದಿರಗಳು, ವಿವಿ, ಐಪಿಎಲ್, ಸೆಮಿನಾರ್ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ. ಸೋಂಕು ವೈರಸ್ ಅನ್ನು ರಾಜ್ಯ ಸರ್ಕಾರ ಮುಂದಿನ ಕೆಲವು ದಿನಗಳಲ್ಲಿ ಹೆಚ್ಚು ಹರಡದಂತೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ.

ಹರ್ಯಾಣ:

ಹರ್ಯಾಣದಲ್ಲಿ ಹದಿನಾಲ್ಕು ಮಂದಿಗೆ ಕೊರೊನಾ ವೈರಸ್ ಇದ್ದಿರುವುದು ಖಚಿತವಾಗಿದ್ದು, ಇವರೆಲ್ಲಾ ವಿದೇಶಿ ಪ್ರಜೆಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಸಾರ್ವಜನಿಕ ಸಭೆ, ಸಮಾರಂಭ, ಕ್ರೀಡಾ ಚಟುವಟಿಕೆ, ಜನರು ಗುಂಪುಗೂಡುವುದನ್ನು ನಿಷೇಧಿಸುವಂತೆ ಆರೋಗ್ಯ ಸಚಿವ ಅನಿಲ್ ವಿಜಿ ಆದೇಶ ನೀಡಿದ್ದಾರೆ. ಸೋನೆಪತ್ ನಲ್ಲಿರುವ ಜಿಂದಾಲ್ ವಿವಿಯಲ್ಲಿ ಮಾರ್ಚ್ 29ರವರೆಗೆ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ತಿಳಿಸಿದೆ.

ಕೇರಳ:

ಕೇರಳ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, 19 ಜನರಿಗೆ ಕೊರೊನಾ ಸೋಂಕು ಇದ್ದಿರುವುದು ಖಚಿತವಾಗಿದೆ. ಇವರಲ್ಲಿ ಮೂವರು ಮಂದಿ ಚೇತರಿಕೆಯಾಗುತ್ತಿದ್ದಾರೆ. ಅಲ್ಲದೇ ಹಕ್ಕಿಜ್ವರದ ಆತಂಕದ ಹಿನ್ನೆಲೆಯಲ್ಲಿ ಪರಪ್ಪನಂಗಡಿ ಪ್ರದೇಶದಲ್ಲಿರುವ ಕೋಳಿಯನ್ನು ಕೊಲ್ಲುವಂತೆ ಕೇರಳ ಸರ್ಕಾರ ಆದೇಶ ನೀಡಿದೆ.

ಕರ್ನಾಟಕ:

ರಾಜ್ಯದಲ್ಲಿ ಆರು ಪ್ರಕರಣಗಳು ಪತ್ತೆಯಾಗಿದೆ. ಕೋವಿಡ್ 19ಕ್ಕೆ ಕಲಬುರಗಿಯ 76ವರ್ಷದ ವೃದ್ಧರೊಬ್ಬರು ಸಾವನ್ನಪ್ಪುವ ಮೂಲಕ ಭಾರತದಲ್ಲಿ ಮೊದಲ ಸಾವಿನ ಪ್ರಕರಣವಾದಂತಾಗಿದೆ. ಸೌದು ಅರೇಬಿಯಾದಿಂದ ಆಗಮಿಸಿದ್ದ ಈ ವ್ಯಕ್ತಿ ಕಲಬುರಗಿಯಲ್ಲಿ ಮಾ.10ರಂದು ನಿಧನರಾಗಿದ್ದರು.

ಈ ಪ್ರಕರಣದ ನಂತರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರ್ನಾಟಕದಲ್ಲಿ ಒಂದು ವಾರ ಶಟ್ ಡೌನ್ ಮಾಡುವಂತೆ ಶುಕ್ರವಾರ ಆದೇಶ ನೀಡಿದ್ದರು.

ಮಹಾರಾಷ್ಟ್ರ:

ಮಹಾರಾಷ್ಟ್ರದಲ್ಲಿ ಒಟ್ಟು 14 ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರ ರಾತ್ರಿ ಐವರು ಕೊರೊನಾ ವೈರಸ್ ಶಂಕಿತ ರೋಗಿಗಳು ಮೇಯೊ ಆಸ್ಪತ್ರೆಯಿಂದ ಪರಾರಿಯಾಗಿದ್ದರು. ನಂತರ ಪೊಲೀಸರ ಕಾರ್ಯಾಚರಣೆಯ ಮೂಲಕ ರೋಗಿಗಳನ್ನು ಆಸ್ಪತ್ರೆಗೆ ವಾಪಸ್ ಕರೆತರಲಾಗಿತ್ತು.

ಎಲ್ಲಾ ಸಿನಿಮಾ ಮಂದಿರ, ಜಿಮ್ಸ್, ಸ್ವಿಮ್ಮಿಂಗ್ ಫೂಲ್ ಗಳನ್ನು ಮಾರ್ಚ್ 30ರವರೆಗೆ ಬಂದ್ ಮಾಡುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.

ಉತ್ತರಪ್ರದೇಶ:

ಉತ್ತರಪ್ರದೇಶದಲ್ಲಿ 11 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಹತ್ತು ಮಂದಿ ಭಾರತೀಯರು, ಒಬ್ಬರು ವಿದೇಶಿ ಪ್ರಜೆ. ಇವರದಲ್ಲಿ ಏಳು ಮಂದಿ ಆಗ್ರಾದವರು. ಇಬ್ಬರು ಘಾಜಿಯಾಬಾದ್, ಒಬ್ಬರು ನೋಯ್ಡಾ, ಒಬ್ಬರು ಲಕ್ನೋ ನಿವಾಸಿ ಎಂದು ವರದಿ ಹೇಳಿದೆ.

ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 1268 ಪ್ರತ್ಯೇಕ ಬೆಡ್ ಗಳ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ವೈರಸ್ ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ 4,100 ವೈದ್ಯರಿಗೆ ತರಬೇತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.