ಬೆಂಕಿ ನಿಯಂತ್ರಣ ವೇಳೆ ಇಬ್ಬರ ಸಾವು

ಬಿಗಡಾಯಿಸಿದ ಪರಿಸ್ಥಿತಿ, 50ಕ್ಕೂ ಹೆಚ್ಚು ಮನೆ ಆಹುತಿ ; ಕಾರ್ಯಾಚರಣೆಗೆ ಇಳಿದ ಸೇನಾ ಪಡೆ

Team Udayavani, Jun 11, 2020, 7:49 AM IST

ಬೆಂಕಿ ನಿಯಂತ್ರಣ ವೇಳೆ ಇಬ್ಬರ ಸಾವು

ಬಗ್ಜಾನ್‌ನ ತೈಲಬಾವಿಯಿಂದ ಬೆಂಕಿ ಹೊರ ಬರುತ್ತಿರುವಂತೆಯೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ.

ದಿಬ್ರೂಗಢ/ಗುವಾಹಾಟಿ: ಅಸ್ಸಾಂನ ತಿನ್ಸು ಕಿಯಾ ಜಿಲ್ಲೆಯ ಬಗ್ಜಾನ್‌ನಲ್ಲಿರುವ ಆಯಿಲ್‌ ಇಂಡಿಯಾ ಲಿಮಿಟೆಡ್‌ನ‌ ತೈಲ ಬಾವಿಯಲ್ಲಿ ಉಂಟಾಗಿರುವ ಬೆಂಕಿಯನ್ನು ನಂದಿಸುವ ಪ್ರಯತ್ನದಲ್ಲಿರುವ ವೇಳೆ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿ ಅಸುನೀಗಿದ್ದಾರೆ. 14 ದಿನಗಳಿಂದ ಅಲ್ಲಿ ಅನಿಲ ಸೋರಿಕೆ ಯಾಗುತ್ತಿತ್ತು. ಮಂಗಳ ವಾರ ತೈಲ ಬಾವಿಯಿಂದ ಬೃಹತ್‌ ಪ್ರಮಾಣದಲ್ಲಿ ಬೆಂಕಿ ಹೊರ ಬರಲಾರಂಭಿಸಿತ್ತು.

ಸುಮಾರು 30 ಕಿ.ಮೀ. ವ್ಯಾಪ್ತಿಯವರೆಗೆ ಹೊಗೆ ಹಬ್ಬಿದ್ದು, ಹಲವು ಮೀಟರ್‌ ಎತ್ತರದಲ್ಲಿ ಬೆಂಕಿ ವ್ಯಾಪಕವಾಗಿ ಉರಿಯುತ್ತಿದೆ. ಅವಘಡದಿಂದ 50ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣೆ ತಂಡಗಳು ಹಾಗೂ ಸಿಂಗಾಪುರದ ತಜ್ಞರ ತಂಡಗಳು ತೊಡಗಿಸಿಕೊಂಡಿವೆ. ಸೇನಾ ಪಡೆ ಕೂಡ ಬೆಂಕಿ ನಂದಿಸುವ ಕಾರ್ಯಕ್ಕೆ ನೆರವಾ ಗುತ್ತಿದೆ. ಪರಿಸ್ಥಿತಿ ಬಿಗಡಾಯಿಸಿರುವುದರಿಂದ ಅಸ್ಸಾಂ ಸರಕಾರ‌ ಕೇಂದ್ರದ ನೆರವು ಕೋರಿದೆ. ಘಟನಾ ಸ್ಥಳದಿಂದ 1.5 ಕಿ.ಮೀ. ಸುತ್ತ   ಮುತ್ತಲಿನ ಗ್ರಾಮಗಳ ಕನಿಷ್ಠ 6 ಸಾವಿರ ಮಂದಿ ಯನ್ನು ಸುರಕ್ಷಿತಾ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಅವಘಡದಿಂದ ತೊಂದರೆಗೊಳಗಾದ ಕುಟುಂಬಕ್ಕೆ ತಲಾ 30 ಸಾವಿರ ರೂ. ಪರಿಹಾರ ನೀಡುವುದಾಗಿ ಒಐಎಲ್‌ ಘೋಷಿಸಿದೆ.

ಪ್ರಧಾನಿ ಭರವಸೆ: ಪ್ರಧಾನಿ ನರೇಂದ್ರ ಮೋದಿ ಘಟನೆ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೊನೊವಾಲ್‌ ಜತೆಗೆ ಮಾತುಕತೆ ನಡೆಸಿದ್ದಾರೆ. ರಾಜ್ಯ ಸರಕಾರ‌ಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಪ್ರಧಾನಿ ತಿಳಿಸಿದ್ದಾರೆ. ಪ್ರಧಾನಿ ಜತೆಗಿನ ಮಾತುಕತೆ ಬಗ್ಗೆ ಅಸ್ಸಾಂ ಸಿಎಂ ಸೊನೊವಾಲ್‌ ಟ್ವೀಟ್‌ ಡಿದ್ದಾರೆ.

ಇಬ್ಬರ ಸಸ್ಪೆಂಡ್‌: ಮೇ 27ರಂದೇ ತೈಲ ಬಾವಿ ಬಳಿ ಅನಿಲ ಸೋರಿಕೆ ಪ್ರಕರಣ ಗೊತ್ತಾಗಿದ್ದರೂ, ಅದರ ಬಗ್ಗೆ ನಿರ್ಲಕ್ಷ್ಯ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಆಯಿಲ್‌ ಇಂಡಿಯಾ ಲಿಮಿಟೆಡ್‌ ಸಸ್ಪೆಂಡ್‌ ಮಾಡಿದೆ. ಸಂಸ್ಥೆಯ ಅಧ್ಯಕ್ಷ ಸುಶೀಲ್‌ ಚಂದ್ರ ಮಿಶ್ರಾ ಪ್ರಕರಣದ ಬಗ್ಗೆ ಐವರು ಸದಸ್ಯರಿರುವ ಸಮಿತಿ ರಚಿಸುವುದಾಗಿ ತಿಳಿಸಿದ್ದರು. ಜತೆಗೆ ನಿರ್ವಹಣೆ ಹೊಣೆ ಇರುವ ಖಾಸಗಿ ಸಂಸ್ಥೆಗೆ ನೋಟಿಸ್‌ ನೀಡಲಾಗಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.