ಅಲಿಗಡದಲ್ಲಿ ಮಾಧ್ಯಮದವರ ಮುಂದೆಯೇ ಎನ್ಕೌಂಟರ್
Team Udayavani, Sep 21, 2018, 6:00 AM IST
ಅಲಿಗಡ: ಉತ್ತರ ಪ್ರದೇಶದ ಅಲಿಗಡದಲ್ಲಿ ಮಾಧ್ಯಮದವರ ಎದುರೇ ಇಬ್ಬರು ಗುರುತರ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಮುಸ್ತಾಕಿಂ ಮತ್ತು ನೌಶಾದ್ ಎಂಬ ಇಬ್ಬರು ವ್ಯಕ್ತಿಗಳ ಶೋಧ ಕಾರ್ಯ ನಡೆಸುತ್ತಿದ್ದೆವು. ಇಬ್ಬರೂ ಹಿಂದೂ ಧಾರ್ಮಿಕ ನಾಯಕರ ಹತ್ಯೆ ಸೇರಿಸಿ ಕನಿಷ್ಠ ಆರು ಪ್ರಕರಣಗಳಲ್ಲಿ ಬೇಕಾದವರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ಸದ್ಯ ನಡೆಸುತ್ತಿರುವ ಎನ್ಕೌಂಟರ್ಗಳ ವಿರುದ್ಧ ಆಕ್ಷೇಪಗಳು ಕೇಳಿ ಬರುತ್ತಿರುವಂತೆಯೇ ಮಾಧ್ಯಮದವರನ್ನು ಕರೆಯಿಸಿಕೊಂಡು ಪೊಲೀಸರು ಎನ್ಕೌಂಟರ್ ನಡೆಸಿದ್ದಾರೆ.
“ಬೆಳಗ್ಗೆ 6.30ಕ್ಕೆ ಪೊಲೀಸ್ ಸಿಬಂದಿ ಎದುರೇ ಇಬ್ಬರು ಬೈಕ್ನಲ್ಲಿ ಹೋದರು. ಅವರನ್ನು ತಡೆಯಲು ಯತ್ನಿಸಿದಾಗ ಅವರು ನಮ್ಮತ್ತ ಗುಂಡು ಹಾರಿಸಿದರು. ಅವರನ್ನು ಅಟ್ಟಿಸಿಕೊಂಡು ಹೋದಾಗಲೂ ನಮ್ಮತ್ತ ಗುಂಡು ಹಾರಿಸಿದರು. ಪ್ರತಿಯಾಗಿ ಗುಂಡು ಹಾರಿಸಿದಾಗ ಅವರು ಗಾಯಗೊಂಡು ನೆಲಕ್ಕೆ ಬಿದ್ದರು. ಆಸ್ಪತ್ರೆಗೆ ದಾಖಲಿಸಿದಾಗ ಅಸುನೀಗಿದ್ದಾರೆ ಎಂದು ವೈದ್ಯರು ಪ್ರಕಟಿಸಿದರು’ ಎಂದು ಅಲಿಗಡ ಜಿಲ್ಲೆಯ ಎಸ್ಪಿ ಅಜಯ್ ಸಾಹಿ° ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ