ಕೇರಳದಲ್ಲಿ ಇನ್ನೂ 2 ವಾರ ಮಳೆ; 9 ಆಣೆಕಟ್ಟಿಗೆ ರೆಡ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್
ಅಕ್ಟೋಬರ್ನಲ್ಲಿ ದಾಖಲೆ ಪ್ರಮಾಣದಲ್ಲಿ ಸುರಿದ ಮಳೆ
Team Udayavani, Oct 22, 2021, 11:00 PM IST
ತಿರುವನಂತಪುರಂ: ಕೇರಳದಲ್ಲಿ ಇನ್ನೂ 2 ವಾರಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಸಿದೆ. ಆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನ. 4ರವರೆಗೆ ರಾಜ್ಯದಲ್ಲಿ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಅ.22ರಿಂದ ಅ.28ರವರೆಗೆ ಲಕ್ಷದ್ವೀಪದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಕೇರಳದಲ್ಲಿ ಅ.14ರಿಂದ ಅ.20ರವರೆಗೆ ಶೇ. 124 ಹೆಚ್ಚುವರಿ ಮಳೆಯಾಗಿದೆ. 72ಮಿ.ಮೀ.ನಷ್ಟಾಗಬೇಕಿದ್ದ ಮಳೆ 161.2 ಮಿ.ಮೀನಷ್ಟಾಗಿದೆ. ಹಾಗೆಯೇ ಅ.1ರಿಂದ ಅ.20ರವರೆಗೆ ರಾಜ್ಯದಲ್ಲಿ ಶೇ.121ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ತಿಳಿಸಲಾಗಿದೆ.
ತುಂಬುತ್ತಿವೆ ಆಣೆಕಟ್ಟುಗಳು:
ರಾಜ್ಯದಲ್ಲಿ ಬಹುತೇಕ ಆಣೆಕಟ್ಟುಗಳು ತುಂಬುವ ಹಂತ ತಲುಪಿವೆ. ಒಳಹರಿವು ಹೆಚ್ಚಿರುವುದರಿಂದ ಗೇಟ್ಗಳನ್ನು ತೆಗೆದು ಹೊರಹರಿವು ಹೆಚ್ಚಿಸಲಾಗಿದೆ. ಇನ್ನೆರೆಡು ವಾರಗಳ ಕಾಲ 9 ಅಣೆಕಟ್ಟುಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 7 ಆಣೆಕಟ್ಟು ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ
ಮತ್ತಿಬ್ಬರು ಶವವಾಗಿ ಪತ್ತೆ:
ಉತ್ತರಾಖಂಡದಲ್ಲಿ ಟ್ರೆಕ್ಕಿಂಗ್ ಹೋಗಿ, ಮಳೆಗೆ ಸಿಲುಕಿ ಕಾಣೆಯಾಗಿದ್ದ 11 ಮಂದಿಯ ಪೈಕಿ ಶುಕ್ರವಾರ ಮತ್ತಿಬ್ಬರ ಮೃತ ದೇಹ ಪತ್ತೆಯಾಗಿದೆ. ಈ ಮೂಲಕ ಮೃತರ ಸಂಖ್ಯೆ 7ಕ್ಕೆ ಏರಿದೆ(ಇಬ್ಬರು ಗುರುವಾರ ಜೀವಂತವಾಗಿ ಸಿಕ್ಕಿದ್ದಾರೆ). ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ