ಪೊಲೀಸರನ್ನು ಕೊಂದು ಪಂಜಾಬ್ ನಿಂದ ಪರಾರಿಯಾಗಿದ್ದ ಇಬ್ಬರು ಸ್ಮಗ್ಲರ್ ಗಳು ಗುಂಡೇಟಿಗೆ ಬಲಿ
Team Udayavani, Jun 11, 2021, 11:09 AM IST
ಕೋಲ್ಕತ್ತಾ: ಪಂಜಾಬ್ ನ ಇಬ್ಬರು ಡ್ರಗ್ ಸ್ಮಗ್ಲರ್ ಗಳನ್ನು ಪಶ್ಚಿಮ ಬಂಗಾಳದಲ್ಲಿ ಹತ್ಯೆ ಮಾಡಲಾಗಿದೆ. ಪಂಜಾಬ್ ನ ಲೂಧಿಯಾನದಲ್ಲಿ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಕೋಲ್ಕತ್ತಾದ ಹೊರವಲಯದಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಜೈಪುಲ್ ಸಿಂಗ್ ಭುಲ್ಲಾರ್ ಮತ್ತು ಜಸ್ಪ್ರೀತ್ ಸಿಂಗ್ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಡ್ರಗ್ ಸ್ಮಗ್ಲರ್ ಗಳು. ಅಪಾರ್ಟ್ ಮೆಂಟ್ ಒಂದರಲ್ಲಿ ಕ್ರಿಮಿನಲ್ ಗಳು ಇದ್ದಾರೆಂಬ ಮಾಹಿತಿಯ ಮೇರೆಗೆ ವಿಶೇಷ ಟಾಸ್ಕ್ ಫೋರ್ಸ್ ದಾಳಿ ನಡೆಸಿತ್ತು. ಈ ವೇಳೆ ದುಷ್ಕರ್ಮಿಗಳು ಪೊಲೀಸರತ್ತ ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಗುಂಡೇಟು ತಿಂದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 91 ಸಾವಿರ ಕೋವಿಡ್ ಪ್ರಕರಣ ಪತ್ತೆ, 3,403 ಸಾವು
ಘಟನೆಯಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಸ್ಥಳದಿಂದ ಏಳು ಲಕ್ಷ ರೂ ನಗದು, ಐದು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಇಬ್ಬರು ಸ್ಮಗ್ಲರ್ ಗಳು ಲೂಧಿಯಾನದಲ್ಲಿ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಜೈಪಾಲ್ ಭುಲ್ಲರ್ ಮತ್ತು ಜಸ್ಪ್ರೀತ್ ಸಿಂಗ್ ತಲೆಗೆ ಕ್ರಮವಾಗಿ ಹತ್ತು ಲಕ್ಷ ರೂ ಮತ್ತು ಐದು ಲಕ್ಷ ರೂ ಬಹುಮಾನ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ