![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ಅಸ್ಸಾಂನಲ್ಲಿ ಸರಣಿ ಭೂಕುಸಿತಕ್ಕೆ 20 ಬಲಿ
Team Udayavani, Jun 3, 2020, 8:59 AM IST
![ಅಸ್ಸಾಂನಲ್ಲಿ ಸರಣಿ ಭೂಕುಸಿತಕ್ಕೆ 20 ಬಲಿ](https://www.udayavani.com/wp-content/uploads/2020/06/Assam-620x345.jpg)
ಗುವಾಹಟಿ: ಭಾರೀ ಮಳೆ, ಪ್ರವಾಹದಿಂದ ತತ್ತರಿಸಿಹೋಗಿರುವ ಅಸ್ಸಾಂನಲ್ಲಿ ಮಂಗಳವಾರ ಸಂಭವಿಸಿದ ಸರಣಿ ಭೂಕುಸಿತವು ಕನಿಷ್ಠ 20 ಮಂದಿಯನ್ನು ಬಲಿಪಡೆದಿದೆ. ದಕ್ಷಿಣ ಅಸ್ಸಾಂನ ಬಾರಕ್ ವ್ಯಾಲಿಯ ಹೈಲಕಂಡಿ, ಕರೀಂಗಂಜ್ ಹಾಗೂ ಕಛಾರ್ ಜಿಲ್ಲೆಗಳಲ್ಲಿ ಮಂಗಳವಾರ ಸರಣಿ ಭೂಕುಸಿತ ಸಂಭವಿಸಿದೆ. 20 ಮಂದಿಯ ಪೈಕಿ ಕಛಾರ್ ಜಿಲ್ಲೆಯ ಲಖೀಪುರದಲ್ಲಿ 7 ಮಂದಿ ಸಾವಿಗೀಡಾದರೆ, ಹೈಲಕಂಡಿಯಲ್ಲಿ 7 ಮತ್ತು ಕರೀಂಗಂಜ್ ನಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಧಾರಾಕಾರ ಮಳೆಯಿಂದಾಗಿಯೇ ಭೂಕುಸಿತದ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಸ್ಸಾಂ ಅರಣ್ಯ ಸಚಿವ ಪರಿಮಳ್ ಶುಕ್ಲವೈದ್ಯ ಅವರು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಹಾಗೂ ಪ್ರವಾಹದಿಂದ ಒಟ್ಟಾರೆ 9 ಮಂದಿ ಅಸುನೀಗಿದ್ದಾರೆ. ಒಟ್ಟಾರೆ 321 ಗ್ರಾಮಗಳು ಜಲಾವೃತವಾಗಿದ್ದು, 3 ಲಕ್ಷದಷ್ಟು ಜನರು ನಿರ್ವಸಿತರಾಗಿದ್ದಾರೆ. ಪ್ರವಾಹದಿಂದಾಗಿ 2,678 ಹೆಕ್ಟೇರ್ ಬೆಳೆ ನಾಶವಾಗಿವೆ.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.