Kasaragod; 2000 ರೂ. ಮುಖಬೆಲೆಯ 7 ಕೋಟಿ ಮೌಲ್ಯದ ನೋಟುಗಳು ವಶ!!


Team Udayavani, Mar 21, 2024, 5:12 PM IST

2000

ಕಾಸರಗೋಡು:ಹೊಸದುರ್ಗ ಸಮೀಪದ ಅಂಬಲತ್ತರ ಪಾರಪ್ಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ಬಚ್ಚಿಡಲಾಗಿದ್ದ, ಕೇಂದ್ರ ಸರಕಾರ ಅಸಿಂಧುಗೊಳಿಸಿರುವ 2000 ರೂ. ಮುಖಬೆಲೆಯ 7.25 ಕೋಟಿ ರೂ. ಅಸಲಿ ಮತ್ತು ನಕಲಿ ಕರೆನ್ಸಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಂಬಲತ್ತರ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ಪ್ರಜೀಶ್‌ ನೇತೃತ್ವದಲ್ಲಿ ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಲಾಗಿತ್ತು. ಬೇಕಲ ಡಿವೈಎಸ್‌ಪಿ ಜಯನ್‌ ಡೊಮಿನಿಕ್‌ ಸಹಿತ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲಿ ಅಕ್ರಮವಾಗಿ ನೋಟುಗಳನ್ನು ಬಚ್ಚಿಟ್ಟಿರುವ ಬಗ್ಗೆ ಲಭಿಸಿದ ರಹಸ್ಯ ಮಾಹಿತಿ ಯನುಸಾರ ಪೊಲೀಸರು ಕಾರ್ಯಾಚರಣೆ ನಡೆಸಿದರು.
ನೋಟು ಪತ್ತೆಯಾದ ಮನೆ ಪಾರಪ್ಪಳ್ಳಿಯ ಬಾಬುರಾಜ್‌ ಮಾಲಕತ್ವದಲ್ಲಿದೆ. ಅದನ್ನು ಮೂಲತಃ ಪಾಣತ್ತೂರು ನಿವಾಸಿ ಹಾಗೂ ಈಗ ಕಲ್ಯೋಟ್ ನಲ್ಲಿ ವಾಸಿಸುತ್ತಿರುವ ಅಬ್ದುಲ್‌ ರಝಾಕ್‌ ಬಾಡಿಗೆಗೆ ಪಡೆದಿದ್ದರು.

7 ವರ್ಷಗಳಿಂದ ಬೇಕಲ ಹದ್ದಾದ್‌ ನಗರದಲ್ಲಿ ವಾಸಿಸುತ್ತಿರುವ ಕರ್ನಾಟಕದ ಪುತ್ತೂರು ಮೂಲದ ಸುಲೈಮಾನ್‌ ಎಂಬಾತನ ಸಹವರ್ತಿ ಅಬ್ದುಲ್‌ ರಝಾಕನು ಸುಲೈಮಾನ್‌ ವ್ಯವಹಾರಗಳಲ್ಲಿ ಮಧ್ಯವರ್ತಿಯಾಗಿ ಕೆಲಸ ನಿರ್ವಹಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅವರ ಅಸಲಿ ವ್ಯವಹಾರ ಏನು ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ.

ನೋಟುಗಳನ್ನು ಅಂಬಲತ್ತರ ಠಾಣೆಗೆ ಕೊಂಡೊಯ್ಯಲಾಗಿದೆ. ಕೆಲವು ಕಂತೆಗಳಲ್ಲಿ 100ಕ್ಕಿಂತ ಕಡಿಮೆ ನೋಟುಗಳಿದ್ದವು. ನೋಣು ಎಣಿಸುವ ಯಂತ್ರಗಳ ಮೂಲಕ ಎಣಿಕೆ ನಡೆಸಿದಾಗ 7.25 ಕೋಟಿ ರೂ. ಕಂಡು ಬಂದಿದೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅದರಲ್ಲಿ ಖೋಟಾ ನೋಟುಗಳು ಪತ್ತೆಯಾದವು. ಅಸಲಿ ಮತ್ತ ನಕಲಿ ನೋಟುಗಳನ್ನು ಬೇರ್ಪಡಿಸುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ.

ಪುತ್ತೂರಿಗೂ ತನಿಖೆ ವಿಸ್ತರಣೆ
ನೋಟುಗಳನ್ನು ವಶಪಡಿಸಿಕೊಂಡ ಬಳಿಕ ಸುಲೈಮಾನ್‌ ಹಾಗೂ ಅಬ್ದುಲ್‌ ರಝಾಕ್‌ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಶೋಧ ನಡೆಸುತ್ತಿದ್ದಾರೆ.

ಎರಡು ಸಾವಿರ ಮುಖ ಬೆಲೆಯ ಹಣವನ್ನು ಇಲ್ಲಿ ಇರಿಸಿರುವ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪುತ್ತೂರಿಗೂ ತನಿಖೆ ಯನ್ನು ವಿಸ್ತರಿಸಲಾಗಿದೆ.

ಸುಲೈಮಾನ್‌ ಬೇಕಲ ಬಳಿ ಟೆನ್ನಿಸ್‌ ಕೋರ್ಟ ನ್ನು ಊರವರಿಗಾಗಿ ನಿರ್ಮಿಸಿ ಕೊಟ್ಟಿದ್ದಾನೆ. ಜನರಿಗೆ ಆರ್ಥಿಕ ನೆರವನ್ನೂ ನೀಡುತ್ತಿದ್ದನು. ಅಲ್ಲೇ ಪಕ್ಕದಲ್ಲಿ ದೊಡ್ಡ ಮನೆಯೊಂದನ್ನು ನಿರ್ಮಿಸುತ್ತಿದ್ದಾನೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.