ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್ಗೆ ಜೀವಾವಧಿ ಶಿಕ್ಷೆ
Team Udayavani, Jul 4, 2022, 7:23 AM IST
ಗಾಂಧಿನಗರ: ಇಪ್ಪತ್ತು ವರ್ಷ ಗಳ ಹಿಂದೆ, 2002ರ ಫೆ. 27ರಂದು ನಡೆದ ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ಗಳಲ್ಲಿ ಒಬ್ಬನಾದ ರಫೀಕ್ ಬಟುಕ್ಗೆ ಜೀವಾವಧಿ ಶಿಕ್ಷೆ ವಿಧಿಸಿ ಗೋಧ್ರಾ ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಈ ಹತ್ಯಾಕಾಂಡಕ್ಕೆ ಕಾರಣರಾದವರ ಪೈಕಿ ರಫೀಕ್ 35ನೇ ವ್ಯಕ್ತಿ ಎಂದು ಹೇಳಲಾಗಿದೆ. ಈತನನ್ನು 2021ರ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು.
ಅಯೋಧ್ಯೆಗೆ ತೆರಳಿದ್ದ ಕರಸೇವಕರು ರೈಲಿನಲ್ಲಿ ವಾಪಸಾಗುತ್ತಿದ್ದಾಗ ಗುಜರಾತ್ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ರೈಲಿನ ಕೆಲವು ಬೋಗಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಣಾಮವಾಗಿ ಅದ ರಲ್ಲಿದ್ದ 59 ಮಂದಿ ಕರಸೇವಕರು ಸಜೀವ ದಹನವಾಗಿದ್ದರು. ಈ ಪ್ರಕರಣದ ರೂವಾರಿಗಳಲ್ಲಿ ರಫೀಕ್ ಒಬ್ಬ ಎಂಬುದು ಸಾಬೀತಾ ಗಿರುವುದಾಗಿ ಕೋರ್ಟ್ ತೀರ್ಪು ನೀಡಿದೆ.
ಗೋಧ್ರಾ ರೈಲು ಹತ್ಯಾಕಾಂಡದ ಬಳಿಕ ಇಡೀ ಗುಜರಾತ್ನಲ್ಲಿ ಭಾರೀ ಹಿಂಸಾಚಾರಗಳು ಆರಂಭವಾಗಿದ್ದವು. ಆಗ ಗುಜರಾತ್ ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿ ಯಾಗಿದ್ದರು. ಗೋಧ್ರೋತ್ತರ ಗಲಭೆಯಲ್ಲಿ ಒಟ್ಟು 1,200 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ