ಹೈ ಅಲರ್ಟ್:ಭಾರತಕ್ಕೆ 21 ಲಷ್ಕರ್ ಉಗ್ರರ ಲಗ್ಗೆ, ಭಾರೀ ದಾಳಿಗೆ ಸ್ಕೆಚ್
Team Udayavani, May 26, 2017, 3:17 PM IST
ಹೊಸದಿಲ್ಲಿ : ಸುಮಾರು 20 -21 ಲಷ್ಕರ್ ಎ ತಯ್ಯಬ ಉಗ್ರರ ಗುಂಪೊಂದು ಭಾರತದೊಳಗೆ ನುಸುಳಿ ಬಂದಿದ್ದು ಭಾರೀ ದೊಡ್ಡ ಭಯೋತ್ಪಾದಕ ದಾಳಿಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ದಿಲ್ಲಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಡಿಎನ್ಎ ವರದಿಯ ಪ್ರಕಾರ ಕೇಂದ್ರ ಗುಪ್ತಚರ ದಳವು ದೇಶದ ಮಹಾ ನಗರಗಳ ಉಗ್ರ ನಿಗ್ರಹ ಘಟಕಗಳಿಗೆ ಸಂಭಾವ್ಯ ಉಗ್ರ ದಾಳಿಗಳ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ.
ಪಾಕಿಸ್ಥಾನದ ಇಂಟರ್ ಸರ್ವಿಸ್ ಇಂಟೆಲಿಜೆನ್ಸಿ (ಐಎಸ್ಐ) ಆದೇಶದ ಪ್ರಕಾರ ಸುಮಾರು 21 ಲಷ್ಕರ್ ಉಗ್ರರು ಭಾರತವನ್ನು ಪ್ರವೇಶಿಸಿದ್ದಾರೆ; ಕೆಲವು ಉಗ್ರರು ಮುಂಬಯಿ ಮತ್ತು ದಿಲ್ಲಿಯಲ್ಲಿ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಅಡಗಿಕೊಂಡಿದ್ದಾರೆ. ಭಾರತದ ವಿವಿಧೆಡೆಗಳಲ್ಲಿ ಭಾರೀ ಭಯೋತ್ಪಾದಕ ದಾಳಿ ನಡೆಸುವದು ಈ ಉಗ್ರರ ಉದ್ದೇಶವಾಗಿದ್ದು ಅದಕ್ಕೆ ತಕ್ಕಂತೆ ಅವರು ಸಂಚನ್ನು ರೂಪಿಸುತ್ತಿದ್ದಾರೆ ಎಂದು ಡಿಎನ್ಎ ವರದಿ ತಿಳಿಸಿದೆ.
ವಿವಿಧ ರಾಜ್ಯಗಳ ಉಗ್ರ ನಿಗ್ರಹ ಘಟಕಗಳು ಈ ಬೆಳವಣಿಗೆಯನ್ನು ಅನುಸರಿಸಿ ಮೆಟ್ರೋ ಸ್ಟೇಶನ್ಗಳಲ್ಲಿ, ರೈಲ್ವೇ ನಿಲ್ದಾಣಗಳಲ್ಲಿ, ವಿಮಾನ ನಿಲ್ದಾಣಗಳಲ್ಲಿ, ಪ್ರವಾಸಿಗಳಿಗೆ ಪ್ರಸಿದ್ಧವಾಗಿರುವ ಹೊಟೇಲುಗಳಲ್ಲಿ, ಜನದಟ್ಟನೆಯ ಮಾರುಕಟ್ಟೆಗಳಲ್ಲಿ, ಧಾರ್ಮಿಕ ತಾಣಗಳಲ್ಲಿ, ಸ್ಟೇಡಿಯಂ ಗಳಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿವೆ.
ಸರಿಯಾದ ರೀತಿಯಲ್ಲಿ ಕೂಲಂಕಷ ತಪಾಸಣೆ, ಬಿಗಿ ಭದ್ರತೆ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು