ಈ ವರ್ಷ ತಬ್ಲಿಘ್ ನ 2,100 ವಿದೇಶಿ ಅನುಯಾಯಿಗಳು ಭಾರತಕ್ಕೆ

ನಿಜಾಮುದ್ದೀನ್‌ ಅವಘಡಕ್ಕೆ ವಿದೇಶಿ ಮೊಹರು!; ತಾಲಿಬಾನ್‌ ಮಾದರಿ ಕೃತ್ಯ : ಸಚಿವ ನಖ್ವೀ ಆರೋಪ

Team Udayavani, Apr 1, 2020, 3:51 PM IST

ಈ ವರ್ಷ ತಬ್ಲಿಘ್ ನ 2,100 ವಿದೇಶಿ ಅನುಯಾಯಿಗಳು ಭಾರತಕ್ಕೆ

ಎಲ್‌ಎನ್‌ಜೆಪಿ ಆಸ್ಪತ್ರೆ ಆವರಣದಲ್ಲಿ ಸೋಂಕಿತರ ಪರೀಕ್ಷೆ ನಡೆಸಲಾಯಿತು.

ನವದೆಹಲಿ: ಇಸ್ಲಾಂ ಧರ್ಮ ಪ್ರಚಾರಕ ಸಂಘಟನೆಯಾದ ತಬ್ಲಿಘ್-ಎ-ಜಮಾತ್‌ನ ನಾನಾ ಕಾರ್ಯಕ್ರಮಗಳಲ್ಲಿ, ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 2,100 ವಿದೇಶೀಯರು ಭಾರತಕ್ಕೆ ಬಂದು ಹೋಗಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ದೆಹಲಿಯ ನಿಜಾಮುದ್ದೀನ್‌ ಪ್ರಾಂತ್ಯದಲ್ಲಿ ಮಾ. 13-15ರಂದು ಜರುಗಿದ ತಬ್ಲಿಘ್-ಎ-ಜಮಾತ್‌ ಸಂಘಟನೆಯ ಅಂತಾರಾಷ್ಟ್ರೀಯ ಸಮಾವೇಶದಿಂದ ಕೋವಿಡ್ 19 ವೈರಸ್ ಈಗ ಮತ್ತಷ್ಟು ದೇಶವ್ಯಾಪಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ನೀಡಿರುವ ಈ ಮಾಹಿತಿ ಮಹತ್ವ ಪಡೆದುಕೊಂಡಿದೆ.

824 ವಿದೇಶಿಗರು ಭೇಟಿ: ಇದೇ ವರ್ಷ ಮಾ. 21ರ ಹೊತ್ತಿಗೆ, ದೇಶದೆಲ್ಲೆಡೆ ಇರುವ ತಬ್ಲಿಘ್-ಎ-ಜಮಾತ್‌ ಸಂಘಟನೆಯ ಶಾಖಾ ಕಚೇರಿಗಳಿಗೆ ಆ ಸಂಘಟನೆಯ ಕಟ್ಟಾ ಬೆಂಬಲಿಗರಾದ ಸುಮಾರು 824 ವಿದೇಶಿಗರು ಭೇಟಿ ನೀಡಿದ್ದರು. ಇವರಲ್ಲಿ 216 ವಿದೇಶಿ ಬೆಂಬಲಿಗರು ನವದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಸಂಘಟನೆಯ ಕೇಂದ್ರ ಕಚೇರಿಯಲ್ಲೇ ಉಳಿದುಕೊಂಡಿದ್ದರು.

ಉಳಿದ ವಿದೇಶಿಗರು, ಮಾ. 24ರಂದು ಪ್ರಧಾನಿ ಮೋದಿಯವರಿಂದ ಹೊರಬಿದ್ದ 21 ದಿನಗಳ ಲಾಕ್‌ಡೌನ್‌ ಘೋಷಣೆಗೂ ಮುನ್ನವೇ ದೇಶ ತೊರೆದಿರಬಹುದು ಎಂದು ಗೃಹ ಇಲಾಖೆ ಹೇಳಿದೆ.

ಕಾರ್ಯಕರ್ತರು ಆಸ್ಪತ್ರೆಗೆ: ನಿಜಾಮುದ್ದೀನ್‌ ಪ್ರದೇಶ ಭಾರತದ ಕೋವಿಡ್ 19 ಹಾಟ್‌ಸ್ಪಾಟ್‌ ಎಂದು ಪರಿಗಣಿಸಲ್ಪಟ್ಟ ಮೇಲೆ ನಡೆಸಿದ ಸಮುದಾಯ ಪರೀಕ್ಷೆಗಳಿಂದ ತಬ್ಲಿಘ್ ನ 1,300 ಕಾರ್ಯಕರ್ತರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದೆ. ಅವರೆಲ್ಲರನ್ನೂ ನರೇಲಾ, ಸುಲ್ತಾನ್‌ಪುರಿ ಹಾಗೂ ಬಕ್ಕಾರ್‌ವಾಲಾ ಆಸ್ಪತ್ರೆಗಳಲ್ಲಿರುವ ಪ್ರತ್ಯೇಕ ನಿಗಾ ಘಟಕಗಳಿಗೆ ಹಾಗೂ ದೆಹಲಿಯ ಎಲ್‌ಎನ್‌ಜೆಪಿ, ಆರ್‌ಜಿಎಸ್‌ಎಸ್‌, ಜಿಟಿಬಿ, ಡಿಡಿಯು ಆಸ್ಪತ್ರೆಗಳಿಗೆ ಮತ್ತು ಹರ್ಯಾಣದ ಝಜ್ಜರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸದಾಗಿ, ಅದೇ ಸಂಘಟನೆಯ 303 ಕಾರ್ಯಕರ್ತರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ಅವರನ್ನು ಕೂಡ ನವದೆಹಲಿಯ ನಾನಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಗೃಹ ಇಲಾಖೆ ಹೇಳಿದೆ.

ತನಿಖೆಗೆ ಆದೇಶ
ದೆಹಲಿಯಲ್ಲಿ ನಡೆದ ನಿಜಾಮುದ್ದೀನ್‌ ಸಮಾವೇಶಕ್ಕೆ ಗುಜರಾತ್‌ನಿಂದ ಕೆಲ ಮುಸ್ಲಿಮರು ಹೋಗಿರುವ ಖಚಿತ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ಗುಜರಾತ್‌ ಪೊಲೀಸರು ಬಲೆ ಬೀಸಿದ್ದಾರೆ. ಸಮಾವೇಶಕ್ಕೆ ಭಾವನಗರದ ಕೆಲವು ನಿವಾಸಿಗಳು ಹೋಗಿರುವುದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ. ಅವರ ನಿಖರ ವಿಳಾಸ ಪತ್ತೆ ಹಚ್ಚಿ ಅವರನ್ನು ತಕ್ಷಣವೇ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಗುಜರಾತ್‌ನ ಡಿಜಿಪಿ ಶಿವಾನಂದ ಝಾ ತಿಳಿಸಿದ್ದಾರೆ.

ತೆಲಂಗಾಣದಿಂದ 1 ಸಾವಿರ ಮಂದಿ
ನವದೆಹಲಿಯಲ್ಲಿ ನಡೆದ ನಿಜಾಮುದ್ದೀನ್‌ ಸಮಾವೇಶಕ್ಕೆ ತೆಲಂಗಾಣದಿಂದ ಕನಿಷ್ಠ 1,000 ಜನರು ಹೋಗಿದ್ದಾರೆ ಎಂದು ತೆಲಂಗಾಣ ಸರಕಾರ ತಿಳಿಸಿದೆ. ಅವರನ್ನು ಶೀಘ್ರವೇ ಪತ್ತೆ ಮಾಡಿ, ಅವರನ್ನು ಹಾಗೂ ಅವರ ಆಪ್ತರನ್ನು ಪರೀಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಮಾವೇಶಕ್ಕೆ ಹೋಗಿ ಬಂದು ಮೃತರಾಗಿರುವ ವ್ಯಕ್ತಿಗಳ ಕುಟುಂಬಸ್ಥರನ್ನು ಈಗಾಗಲೇ ಪ್ರತ್ಯೇಕ ನಿಗಾದಲ್ಲಿ ಇರಿಸಲಾಗಿದೆ ಎಂದು ತೆಲಂಗಾಣ ಅಬಕಾರಿಯೊಬ್ಬರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 32 ಲಿಂಕ್‌
ತಮಿಳುನಾಡಿನಲ್ಲಿ ಮಂಗಳವಾರ ಏಳು ಹೊಸ ಕೋವಿಡ್ 19 ವೈರಸ್ ಸೋಂಕಿತರು ಪತ್ತೆಯಾಗಿದ್ದು , ಈ ಮೂಲಕ ಅಲ್ಲಿ ಸೋಂಕಿತರ ಸಂಖ್ಯೆ 74ಕ್ಕೇರಿದೆ. ಇವರಲ್ಲಿ ಕನಿಷ್ಟ 32 ಜನರು ದೆಹಲಿಯ ನಿಜಾಮುದ್ದೀನ್‌ ಸಮಾವೇಶದ ಮೂಲಕ ಹರಡಿರುವ ಸೋಂಕಿತರ ಜೊತೆಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಂಟು ಹೊಂದಿರುವವರಾದ್ದಾರೆ ಎಂದು ತಮಿಳುನಾಡು ಸರಕಾರ ತಿಳಿಸಿದೆ. ದೆಹಲಿ ಸಮಾವೇಶಕ್ಕೆ ತಮಿಳುನಾಡಿನ 1,500 ಜನರು ಹೋಗಿದ್ದಾಗಿ ಅಲ್ಲಿನ ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.

ತಬ್ಲಿಘ್-ಎ-ಜಮಾತ್‌ ಸಂಘಟನೆಯ ಸದಸ್ಯರು ಮಾಡಿರುವುದು ತಾಲಿಬಾನಿಗಳ ಮಾದರಿಯ ದುಷ್ಕೃತ್ಯ . ಕೋವಿಡ್ 19 ವೈರಸ್ ವಿರುದ್ಧ ಇಡೀ ದೇಶವೇ ಸಮರ ಸಾರಿದ್ದಾಗ ಇವರು ಕೋವಿಡ್ 19 ವೈರಸ್ ಹರಡಿರುವುದು ಕ್ರಿಮಿನಲ್‌ ಅಪರಾಧ.
ಮುಕ್ತಾರ್‌ ಅಬ್ಟಾಸ್‌ ನಖ್ವೀ, ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.