ಮೊದಲ ಹಂತದ ಲೋಕ ಅಖಾಡದಲ್ಲಿ 213 ಕ್ರಿಮಿನಲ್ ಅಭ್ಯರ್ಥಿಗಳು! ADR ವರದಿ


Team Udayavani, Apr 6, 2019, 12:04 PM IST

Election-N

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಸುಮಾರು 213 ಅಭ್ಯರ್ಥಿಗಳ ವಿರುದ್ಧ ಕೊಲೆ, ಅಪಹರಣ ಹಾಗೂ ಮಹಿಳೆಯರಿಗೆ ಕಿರುಕುಳ ಸೇರಿದಂತೆ ಗಂಭೀರವಾದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಅಂಕಿಅಂಶದ ವರದಿ ತಿಳಿಸಿದೆ.

ನ್ಯಾಷನಲ್ ಎಲೆಕ್ಷನ್ ವಾಚ್ ಅಂಡ್ ಅಸೋಸಿಯೇಷನ್ ಫಾರ್ ಡೆಮೋಕ್ರಟಿಕ್ ರಿಫಾರ್ಮ್ಸ್ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ 1279 ಅಭ್ಯರ್ಥಿಗಳಲ್ಲಿ 1266 ಅಭ್ಯರ್ಥಿಗಳ ಅಫಿಡವಿತ್ ಅನ್ನು ಪರಿಶೀಲಿಸಿ ವಿಶ್ಲೇಷಣಾ ವರದಿಯನ್ನು ಬಿಡುಗಡೆ ಮಾಡಿದೆ.

ಇದರಲ್ಲಿ 13 ಅಭ್ಯರ್ಥಿಗಳ ಅಫಿಡವಿತ್ ಅನ್ನು ಕೂಲಂಕಷವಾಗಿ ಹಾಗೂ ಸಮರ್ಪಕವಾಗಿ ಪರಿಶೀಲನೆ ನಡೆಸದೇ ಇದ್ದ ಹಿನ್ನೆಲೆಯಲ್ಲಿ ಅದರ ವಿಶ್ಲೇಷಣಾ ವಿವರ ಇಲ್ಲ ಎಂದು ಎಡಿಆರ್ ವಿವರಿಸಿದೆ. ವರದಿಯ ಪ್ರಕಾರ, 1266 ಅಭ್ಯರ್ಥಿಗಳ ಪೈಕಿ ಶೇ.12ರಷ್ಟು ಮಂದಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ. ಶೇ,12ರಷ್ಟು ನ್ಯಾಯಾಲಯದಲ್ಲಿ ದೋಷಿಯಾಗಿದ್ದಾರೆ. 10 ಅಭ್ಯರ್ಥಿಗಳು ತಮ್ಮ ವಿರುದ್ಧ ಕೊಲೆ ಮೊಕದ್ದಮೆ ಎದುರಿಸುತ್ತಿರುವುದಾಗಿ ಘೋಷಿಸಿಕೊಂಡಿರುವುದಾಗಿ ತಿಳಿಸಿದೆ.

25 ಅಭ್ಯರ್ಥಿಗಳು ಕೊಲೆ ಯತ್ನ ಮೊಕದ್ದಮೆ ಎದುರಿಸುತ್ತಿದ್ದಾರೆ, 4 ಅಭ್ಯರ್ಥಿಗಳು ಕಿಡ್ನಾಪ್ ಮೊಕದ್ದಮೆ, 16 ಅಭ್ಯರ್ಥಿಗಳು ಮಹಿಳಾ ಸಂಬಂಧಿ ಮೊಕದ್ದಮೆ, 12 ಅಭ್ಯರ್ಥಿಗಳು ಪ್ರಚೋದನಾಕಾರಿ ಭಾಷಣ ಮಾಡಿದ ಮೊಕದ್ದಮೆ ಎದುರಿಸುತ್ತಿರುವುದಾಗಿ ಅಫಿಡವಿತ್ ನಲ್ಲಿ ಘೋಷಿಸಿಕೊಂಡಿದ್ದಾರೆ.

ಏಪ್ರಿಲ್ 11ರಂದು 91 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಇದರಲ್ಲಿ 37 ಲೋಕಸಭಾ ಕ್ಷೇತ್ರ ರೆಡ್ ಅಲರ್ಟ್ ಎಂದು ಪರಿಗಣಿಸಲಾಗಿದೆ. ರೆಡ್ ಅಲರ್ಟ್ ಅಂದರೆ ಒಂದು ಕ್ಷೇತ್ರದಲ್ಲಿ ಮೂರು ಅಥವಾ ಅದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಎಂದು ವರದಿ ವಿವರಿಸಿದೆ.

ಇದರಲ್ಲಿ 83 ಅಭ್ಯರ್ಥಿಗಳಲ್ಲಿ 30 ಬಿಜೆಪಿಗರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ, 35 ಕಾಂಗ್ರೆಸ್ ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆ,  32 ಅಭ್ಯರ್ಥಿಗಳಲ್ಲಿ 8 ಮಂದಿ ಬಿಎಸ್ಪಿ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇದ್ದಿರುವುದಾಗಿ ತಿಳಿಸಿದೆ.

ವೈಎಸ್ ಆರ್ ಸಿಪಿಯ 13 ಅಭ್ಯರ್ಥಿಗಳು, ಟಿಡಿಪಿಯ 4 ಹಾಗೂ ಟಿಆರ್ ಎಸ್ ನ 5 ಅಭ್ಯರ್ಥಿಗಳು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.