
ಗುತ್ತಿಗೆ ಪಡೆಯಲು ಹನಿಟ್ರ್ಯಾಪ್! 8 ಮಾಜಿ ಸಚಿವರು,VIPಗಳ ಮಂಚಕ್ಕೆ 24 ಕಾಲೇಜು ಹುಡುಗಿಯರು
Team Udayavani, Sep 27, 2019, 7:33 PM IST

ಇಂದೋರ್:ಹನಿ ಟ್ರ್ಯಾಪ್ ಹಗರಣದ ಕಿಂಗ್ ಪಿನ್ ಶ್ವೇತಾ ಜೈನ್ ವಿಶೇಷ ತನಿಖಾ ತಂಡದ ವಿಚಾರಣೆ ವೇಳೆ ಸ್ಫೋಟಕ ಸತ್ಯವನ್ನು ಬಾಯ್ಬಿಟ್ಟಿದ್ದು, ಸರಕಾರದ ಗುತ್ತಿಗೆ ಪಡೆಯಲು ಮಧ್ಯಪ್ರದೇಶದ 8 ಮಂದಿ ಮಾಜಿ ಸಚಿವರುಗಳು ಹಾಗೂ 12 ಉನ್ನತ ಮಟ್ಟದ ಅಧಿಕಾರಿಗಳಿಗೆ ಎರಡು ಡಜನ್ ಗಿಂತಲೂ ಅಧಿಕ ಕಾಲೇಜು ಹುಡುಗಿಯರನ್ನು ಬಳಸಿಕೊಂಡಿದ್ದರು ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಹನಿಟ್ರ್ಯಾಪ್ ನ ಮುಖ್ಯ ಉದ್ದೇಶ ನೂರಾರು ಕೋಟಿ ರೂಪಾಯಿ ಮೊತ್ತದ ಸರಕಾರಿ ಗುತ್ತಿಗೆಯನ್ನು ಪಡೆಯುವುದಾಗಿತ್ತು. ಇದರಲ್ಲಿ ವಿಐಪಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮಾಡಲಾಗುತ್ತಿತ್ತು ಎಂದು ಶ್ವೇತಾ ತಪ್ಪೊಪ್ಪಿಕೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿಷ್ಠಿತ ಕಂಪನಿಗಳು ಗುತ್ತಿಗೆ ಪಡೆಯಲು ಕಮಿಷನ್ ಆಧಾರದ ಮೇಲೆ ಶ್ವೇತಾ ಮತ್ತು ಆಕೆಯ ಸಹಾಯಕಿ ಆರತಿ ದಯಾಳ್ ಗೆ ದುಂಬಾಲು ಬೀಳುತ್ತಿದ್ದರಂತೆ. ಇದಕ್ಕಾಗಿ ಆಕೆ ಐಎಎಸ್, ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳನ್ನು ಬಲೆಗೆ ಹಾಕಿಕೊಳ್ಳಲು ಕಾಲೇಜು ಯುವತಿಯರನ್ನು ಮಂಚಕ್ಕೆ ಕಳುಹಿಸಲು ಬೇಡಿಕೆ ಇಡುತ್ತಿದ್ದರೆಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಮಧ್ಯಮ ವರ್ಗದ ಕಾಲೇಜು ಯುವತಿಯರನ್ನು ಅವರ ತಂದೆ ವಯಸ್ಸಿನ ವ್ಯಕ್ತಿಗಳ ಜತೆ ದೈಹಿಕ ಸಂಬಂಧಕ್ಕಾಗಿ ಕಳುಹಿಸಲಾಗುತ್ತಿತ್ತು ಎಂದು ಶ್ವೇತಾ ವಿಚಾರಣೆಯಲ್ಲಿ ತಿಳಿಸಿದ್ದಾಳೆ. ಪ್ರತಿಷ್ಠಿತ ಕಾಲೇಜಿನ ಯುವತಿಯರನ್ನೇ ಕೆಲವೊಮ್ಮೆ ಆಯ್ಕೆ ಮಾಡಿಕೊಳ್ಳುತ್ತಿರುವುದಾಗಿಯೂ ಆಕೆ ವಿವರಿಸಿದ್ದಾಳೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
