ಅಣೆಕಟ್ಟು ಒಡೆದು 24 ಜನ ಸಾವು
ಮಹಾರಾಷ್ಟ್ರದ ರತ್ನಾಗಿರಿ ಪರಿಸರ ಭಾರೀ ಮಳೆ
Team Udayavani, Jul 4, 2019, 6:00 AM IST
ಚಿಪ್ಳೂಣ್: ಕೊಂಕಣ ಭಾಗದಲ್ಲಿ ಅಬ್ಬರಿಸುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಚಿಪ್ಳೂಣ್ ತಾಲೂಕಿನ ತೇವಾರಿ ಡ್ಯಾಂ (ಅಣೆಕಟ್ಟು) ಒಡೆದು 24 ಜನರು ಕೊಚ್ಚಿಕೊಂಡು ಹೋಗಿದ್ದು, ಏಳು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಚಿಪ್ಳೂಣ್ನಿಂದ 33 ಕಿ.ಮೀ. ದೂರದಲ್ಲಿರುವ ತೇವಾರಿ ಡ್ಯಾಂ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಒಂದು ಬದಿಯಲ್ಲಿ ಒಡೆದು ಹೋಗಿದೆ. ಇದರಿಂದ ಒಮ್ಮಿಂದಲೇ ರಭಸವಾಗಿ ನೀರು ಧುಮುಕಿ ಜಲಾಶಯದ ಕೆಳಭಾಗದಲ್ಲಿರುವ ಏಳು ಗ್ರಾಮಗಳಿಗೆ ನುಗ್ಗಿ ಪ್ರವಾಹ ಉಂಟಾಯಿತು. ನೀರಿನ ರಭಸಕ್ಕೆ 24 ಜನರು ಕೊಚ್ಚಿಕೊಂಡು ಹೋಗಿದ್ದಾರೆ. ಇದಷ್ಟೇ ಅಲ್ಲ, ಡ್ಯಾಂ ಪಕ್ಕದಲ್ಲಿರುವ 13 ಮನೆಗಳೂ ನೀರಿನಲ್ಲಿ ಕೊಚ್ಚಿ ಹೋಗಿವೆ. ತೇವಾರಿ ಜಲಾಶಯದ ಪಕ್ಕದಲ್ಲಿರುವ ವಾಲೋಟಿ, ಧಳವಟನೆ, ಘಾನೆ, ಸತಿ, ಚಿಂಚಗರಿ, ಕ್ರೆಡಿ, ಚಿವುಳಾ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಗ್ರಾಮಗಳಿಗೆ ಹೋಗುವ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ