2021ರ ಸಪ್ಟೆಂಬರ್ ಒಳಗೆ ದೇಶದ 25-30 ಕೋಟಿ ಜನರಿಗೆ ಕೋವಿಡ್ ಲಸಿಕೆ ಸಿಗಲಿದೆ: ಹರ್ಷವರ್ಧನ್
Team Udayavani, Nov 23, 2020, 2:55 PM IST
ಹೊಸದಿಲ್ಲಿ: ಮುಂದಿನ ವರ್ಷದ ಸಪ್ಟೆಂಬರ್ ಒಳಗೆ ದೇಶದ 25ರಿಂದ 30 ಕೋಟಿ ಜನರಿಗೆ ಕೋವಿಡ್-19 ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಅವರು, 2021ರ ಮೊದಲ ಮೂರು ತಿಂಗಳಲ್ಲಿ ಭಾರತ ಕೋವಿಡ್ ಲಸಿಕೆಯನ್ನು ಪಡೆಯಲಿದೆ. ಸಪ್ಟೆಂಬರ್ ಒಳಗೆ 25ರಿಂದ 30 ಕೋಟಿ ಜನರಿಗೆ ಲಸಿಕೆ ಸಿಗಲಿದೆ ಎಂದು ಹೇಳಿದರು.
ಯಾರು ಮೊದಲು ಲಸಿಕೆ ಪಡೆಯುತ್ತಾರೆ ಎನ್ನುವುದರ ಕುರಿತು ಮಾತನಾಡಿದ ಅವರು, ಆರೋಗ್ಯ ಕಾರ್ಯಕರ್ತರ ದತ್ತಾಂಶಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಅಪ್ಲೋಡ್ ಮಾಡಲಾಗುವುದು ಎಂದರು. ಮುಂಚೂಣಿಯ ಕಾರ್ಯಕರ್ತರಾದ ಪೋಲಿಸ್, ಅರೆಸೈನಿಕ, ನೈರ್ಮಲ್ಯೀಕರಣದಲ್ಲಿ ತೊಡಗಿರುವವರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟವರನ್ನು ಮೊದಲು ಪರಿಗಣಿಸಲಾಗುತ್ತದೆ ಎಂದರು.
ಇದನ್ನೂ ಓದಿ:ಆ್ಯಂಟಿ ಬಯೋಟಿಕ್ ಈ ಶುಂಠಿ! : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ
ಹೊಸದಿಲ್ಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಮಾತನಾಡಿದ ಅವರು, ದಿಲ್ಲಿಯ ಕೆಲವು ವಿದ್ಯಾವಂತ ಜನರ ನಿರ್ಲಕ್ಯವೂ ಇದಕ್ಕೆ ಕಾರಣ. ಆರ್ ಟಿ- ಪಿಸಿಆರ್ ಗಳ ಸಾಮರ್ಥ್ಯ ಹೆಚ್ಚಿಸಲಾಗಿದೆ. ಸಂಚಾರಿ ಪರೀಕ್ಷಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ನಮ್ಮಿಂದ ಏನು ಸಾಧ್ಯವೋ ಅದೆಲ್ಲವನ್ನೂ ಮಾಡುತ್ತಿದ್ದೇವೆ ಎಂದು ಹರ್ಷವರ್ಧನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!